ಕನಸು ನನಸುಗಳೆಲ್ಲ ಯಾರಿಗೋ ಮುಡಿಪಾಗಿ

ಕನಸು ನನಸುಗಳೆಲ್ಲ ಯಾರಿಗೋ ಮುಡಿಪಾಗಿ
ಹಾಡುಗಳಲೆಲ್ಲೆಲ್ಲು ಯಾರದೋ ಛಾಯೆಯೇ
ಮೂಡಿರಲು “ಇದು ಯಾರೋ?” ಎನುತ ಕಾತರರಾಗಿ
ಗೆಳೆಯರೆಲ್ಲರು ನನ್ನ ಕಾಡುತಿರೆ, ನಿನ್ನನ್ನೇ
ಬಣ್ಣಿಸಲು ಹೊರಟಿಹೆನು – ನಿನ್ನ ನೆನವಿನಲೆನ್ನ
ಮನದ ಮಾತುಗಳೆಲ್ಲ ರಂಗಾಗಿ ಹಾರುತಿವೆ!
ಒಂದು ಸಂಜೆಯ ಕನಸು ಬಾಳಿನಿರುಳಿನ ಮುನ್ನ
ಮೆರೆದು ಮರೆಯಾಗುವೊಲು ದುಗುಡದಲಿ ಮಾಸುತಿವೆ!

ಮೌನದಲಿ ದುಗುಡದಲಿ ಮುದುಡಿರಲು ಮನದೊಲವು
ಬಣ್ಣನೆಯ ಬಣ್ಣಕ್ಕೆ ನಿಲುಕದಿರೆ ಅದನೆಂತು
ಅರಿಯುವುದು, ಅರಸುವುದು?  ಎದೆಯ ಕಂಬನಿ ಹರಿದು
ಬಾಳ ಬಳಸುತಲಿಹುದು! ನಿನ್ನೊಲವ ಸುಖವಂತು
ಮುಗಿಲ ಮೋಡದ ಹಾಗೆ ಮಾಯವಾಗಿರಲಿಂದು
ಉಳಿದಿಹುದು ಕಂಗಳಿಗೆ ನಿನ್ನ ನೆನಪಿನ ಬಿಂದು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಂಬಿಕೆ
Next post ಅಂತರ

ಸಣ್ಣ ಕತೆ

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

cheap jordans|wholesale air max|wholesale jordans|wholesale jewelry|wholesale jerseys