ಅದರ ಸಪ್ಪುಳ ಬೇರೆ

ಅದರ ಸಪ್ಪುಳ ಬೇರೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಶಿವರಾತ್ರಿಯ ಮರುದಿನ ತೀವ್ರ ಅಡಿಗೆ ಮಾಡಿ, ಬೆಳಗಾಗುವುದರಲ್ಲಿ ಊಟದ ಸಿದ್ಧತೆ ನಡೆಯಿಸುವುದು ವಾಡಿಕೆ. ಲಿಂಗಾಯತರಾದವರು ಮನೆದೇವರನ್ನು ಪೂಜಿಸಿದ ಬಳಿಕ, ಒಬ್ಬ ಜಂಗಮನನ್ನು ಕರೆತಂದು ಉಣ್ಣಿಸಿವ ತರ್ವಾಯವೇ ಮನೆಯವರ ಊಟವಾಗುವದು.

ಹಳ್ಳಿಯಲ್ಲಿ ಅಂದು ಜಂಗಮನು ಸಿಗುವುದೂ ಕಷ್ಟವೇ. ಸರತಿಯಂತೆ ಮನೆ ಮುಗಿಸಬೇಕಾಗುವುದರಿಂದ ಸಕಾಲಕ್ಕೆ ಜಂಗಮ ಬರಲಾರನು.

ಶೆಟ್ಟರ ತಾಯಿ ಅಂದು ಜಂಗಮನ ದಾರಿ ನೋಡುತ್ತ ಕುಳಿತೇ ಕುಳಿತಳು. ಬಹಳ ಹೊತ್ತಿನ ಮೇಲೆ ಜಂಗಮನು ಬಂದನು- ಅಜ್ಜಿ ಆತನ ಕೈಕಾಲಿಗೆ ನೀರು ಕೊಟ್ಟು ಗದ್ದಿಗೆಯ ಮೇಲೆ ಕುಳ್ಳರಿಸಿದಳು. ಧೂಳವಾದೋದಕ ತೆಗೆದುಕೊಂಡು ಮನೆಯಲ್ಲೆಲ್ಲ ಸಿಂಪಡಿಸಿದಳು. ಆ ಬಳಿಕ ತೊಳೆದ ತಾಬಾಣವನ್ನು ತಂದು ಜಂಗಮನ ಮುಂದಿರಿಸಿ, ತಾನು ಉಣಬಡಿಸುವದಕ್ಕೆ ಎತ್ತುಗಡೆ ನಡೆಸಿದಳು.

ಗದ್ದಿಗೆಯ ಮೇಲೆ ಕುಳಿತ ಜಂಗಮನಿಗೂ ತಿಳಿಯದಂತೆ ಒಂದು ಅಪಾನವಾಯು ಹೊರಬಿದ್ದು ಸಪ್ಪುಳ ಮಾಡಿತು. ಆ ಸಪ್ಪುಳ ಕಿವಿಗೆ ಬಿದ್ದಾಗ ಆತನ ಲಕ್ಷ್ಯಕ್ಕೆ ಬಂತು. ಮನೆಯವರು ಏನೆಂದುಕೊಳ್ಳುವರೋ ಎಂದು ಚಿಂತಿಸತೊಡಗಿದನು.

ಸಾಧ್ಯವಿದ್ದಷ್ಟು ಮನೆಯವರ ತಿಳುವಳಿಕೆ ದೂರಗೊಳಿಸುವ ಸಲುವಾಗಿ, ತಾಬಾಣವನ್ನು ತುದಿಬೆರಳುಗಳಿಂದ ತಿಕ್ಕಿ ಒರೆಸುತ್ತ ಬೆರಳು ಎಳೆದು ಸಪ್ಪುಳ
ಮಾಡಲು ತೊಡಗಿದನು.

ಅಷ್ಟರಲ್ಲಿ ಅಜ್ಜಿ ಬಂದು ವಿನಯದಿಂದ ಹೇಳಿದಳು – “ಇದರ ಸಪ್ಪುಳ ಬೇರೆ ಆಗ್ತದೆ ಅಪ್ಪಾ ಅವರೇ.”

ಅಜ್ಜಿಯ ಮಾತು ಕೇಳಿ ಜಂಗಮನಿಗೆ ನೆಲದಲ್ಲಿ ಇಳಿದು ಹೋದಂತಾಯಿತು, ನಾಚಿಕೆಯಿಂದ ಮುಂದಿನ ಕೆಲಸವನ್ನು ಅವಸರವಸರವಾಗಿ ಮುಗಿಸಿ ಎದ್ದು
ಓಡಿದನು. ದಕ್ಷಿಣೆ ಕೇಳುವುದನ್ನೂ ಮರೆತನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಲ್ಲಿ ನೋಡು
Next post ಸಬ್‌ಇನ್ಸ್‌ಪೆಕ್ಟರ್‍ ಹೇಳಿದ್ದು

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

cheap jordans|wholesale air max|wholesale jordans|wholesale jewelry|wholesale jerseys