ಹೋಗಿ ನೋಡುವ ಬಾರೆ

ಹೋಗಿ ನೋಡುವ ಬಾರೆ
ಸಾಗಿ ಸೊಗಸ ದೊರಿ
ಡಾಕ್ಟರ ಸಾಹೇಬನೀತಾ || ಪ ||

ಬೇಗ ವನಸ್ಪತಿ ಔಷದ ಮೂಲಕ
ತೂಗಿ ಕೊಡುವ ಘನ ಆಗಮ ವಂದಿತ
ರಾಗದಿಂದ ನಾ ಬಂದು ಉಸುರಿ ಮನ
ಯೋಗದಿ ನೋಡಿದೆ ಹೋಗಿ ಈ ಕ್ಷಣ || ೧ ||

ವೇದವೇದ್ಯನಾದರಶದಿ ಬಂದು
ಶೋಧನೆ ಸುಜನರ ಕಾಯ್ದುಕೊಂಡು ಕಮಲಾನ್ವಿತ
ಮೇದಿನಿವಾಸನೆ ಗಾದಿಯ ಮೇಲೆ ಗಮಕದಲಿ ಕುಳಿತು
ಬ್ರಹ್ಮಾಂಡಕನಂದದ ರೋಗದ ಮೇದಕ || ೨ ||

ಮನಸಿಜನಂದದಿ ಮಾತನಾಡುವ ಘನರೂಪನೆ
ಶಾಶ್ವತ ಅನುಸರಿಸೀತನ ಸನ್ಮುಖಕೆ ವಂದಿಸಲಾರೆನೆ ?
ಎನಿತು ವಿಸ್ತರಸಿ ಪೇಳುವೆ ತಕ್ಷಣ
ಚಿನುಮಯ ಶಿಶುನಾಳಧೀಶನ ದಯದಿಂ
ಮನಒಲಿದುಸುರಿದೆ ನಿನಗರಿಕಿರಲಿ
ಗುಣದಿ ನಿನ್ನೊಳು ತಿಳಿದು ನೋಡಿಕೋ || ೩ ||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಂಪನ ಶಾಂತಿಯ ತೋಟ
Next post ಊರ್ಮಿಳೆ

ಸಣ್ಣ ಕತೆ

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

cheap jordans|wholesale air max|wholesale jordans|wholesale jewelry|wholesale jerseys