ಅಗ್ಗದರವಿಯ ತಂದು ಹಿಗ್ಗಿ ಹೊಲೆಸಿದೆನಂಗಿ

ಅಗ್ಗದರವಿ ತಂದು
ಹಿಗ್ಗಿ ಹೊಲೆಸಿದೆನಂಗಿ
ಹೆಗ್ಗಣ ವೈತವ್ವ ತಂಗಿ ಈ ಅಂಗೀ ||ಪ||

ಅಗಣಿತ ವಿಷಯದ
ಆರು ಗೇಣಿನ ಕವಚ
ಬಗಲು ಬೆವರನು ಕಡಿದು
ಸಿಗದೆ ಹೋಯಿವ್ವ ತಂಗಿ ಈ ಅಂಗೀ ||೧||

ಬುದ್ಧಿಗೇಡಿಗಳಾಗಿ
ನಿದ್ದಿ ಕೆಡಿಸಿಕೊಂಡು
ಎದ್ದು ನೋಡಲು ಕರ್ಮ
ಗುದ್ದಿನೊಳಡಗಿಕೊಂಡಿತವ್ವ ತಂಗೀ ಈ ಅಂಗೀ ||೨||

ಕಳನೀಪರಿ ರಾತ್ರಿ
ಬೆಳಗಾಗೋ ಸಮಯದಿ
ಚಲುವ ಶಿಶುನಾಳದೀಶ-
ನುಳುವಿ ಕೊಟ್ಟಾನವ್ವ ತಂಗಿ ಈ ಅಂಗೀ ||೩||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಿದ್ಧಾಂತ
Next post ಕರ್ಪುರದಾರುತಿ ಬೆಳಗಿರೆ ಹರಗೆ

ಸಣ್ಣ ಕತೆ

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys