ವಾರಿಜಮುಖಿ ದೊಡ್ಡಶಹರ ಹುಬ್ಬಳ್ಳಿಯೊಳು

ವಾರಿಜಮುಖಿ ದೊಡ್ಡಶಹರ ಹುಬ್ಬಳ್ಳಿಯೊಳು
ಕೋರಿ ಗಂಗಪ್ಪ ಸಾವುಕಾರನು ||ಪ||

ಧಾರುಣಿಯೊಳು ಸಣ್ಣ ಊರು ಕರಡೀಗುಡ್ಡ
ಹಾರೈಸುತ ವ್ಯವಹಾರಕ್ಹೋಗಿ ಒಬ್ಬ
ವೀರ ಜಂಗಮನ ಹೇಣತಿ ಕೆಣಕಲು
ಮಾರಿಗೋಲಿಯೊಳು ಮರಣಹೊಂದಿದಾ ||ಅ.ಪ.||

ಸನುಮತಿಯಲ್ಲಿ ಸಾಧು ಸಜ್ಜನ ಸಂಪ್ರೀತನು
ಧನ ಸಿರಿ ಕನಕ ವಸ್ತು ಕೈಗೊಂಡು ಮೆರೆವ ಸಂಪ್ರೀತನು
ಗಣಗಣರತ್ನ ವಾಣಿಜ್ಯ ಕುಲಜಾತನು
ಅನುದಿನ ಕೂಡಿ ನಡೆವ ಸ್ನೇಹಿತ ಮಾಂತಯ್ಯನ ಪ್ರೀತನು
ಏನು ಹೇಳಲಿ ತನಗಾಗುವ ಹಾನಿಯು
ಕಣಗಾಣದೆ ಕೆಟ್ಟ ಹೆಣ್ಣಿನ ಸಂಗದಿ
ಮುಣ್ಣುಗೂಡಿಸಿ ಮಾಯದ ಉರ್ಲಗಣ್ಣಿಗೆ
ವಣ ಅಪಮೃತ್ಯುವಿನಿಂದ ಸತ್ತುಹೋದನೈ ||೧||

ಜಡಬುದ್ಧಿಗೆ ಜನ್ಮಾಂತರ ವಿಧಿಕೃತ ಕೂಡಿತು
ತಡೆಯದೆ ವಿಷಯದಿ ಮಾಯವ
ಒಡಲೊಳ್ ಮತ್ಸರ ಮೂಡಿತು
ಅಡಗಿಮಾಡಿ ಉಣಬಸಬೇಕೆಂಬುದು ಕಲಹವ ದೂಡಿತು
ಪ್ರೀತಿಯೆಡೆಗೊಂಡು ಅರಿವಿಲ್ಲದ ಕಲಹಕ ದೂಡಿತು
ನಡೆತಪ್ಪಿತುಯೆಂದೆನೆನುತಲೆ ಜಂಗಮ
ಕಡುರೋಷದಿ ಹಿಡಿದೆದ್ದು ಖಡ್ಲದಿಂ
ಕಡಿಯಲು ಪಕ್ಕದಿ ಎಲುಬು ಮುರಿದು ಶಿರ
ಸಿಡಿಮಿಡಿಗೊಳ್ಳುತಲಿ ಪೊಡವಿಗುದುರಿತೌ ||೨||

ಕೆಲ ಬಲದವರೆಚ್ಚಿಸಲು ಪೋಲೀಸ ಕೇಳಿದಾ
ಅಳವಳಗೊಳುತಲಿ ಮನದೊಳಗತಿ ಕೋಪವ ತಾಳಿದಾ
ಬಲುಗಡ ಕುಲಕರ್ಣಿಗಳ ಕರಿಯಂತ್ಹೇಳಿದಾ
ಒಳಗಿಂದೊಳಗೆ ಬರೆದು ಹುಜೂರರಿಗೆ ರೀಪೋರ್ಟವ ಮಾಡಿದಾ
ಒಳಮಾತಿಲೆ ಅಯ್ಯನ ಕೈ ಖಡ್ಗವ ಕೆಳಗಿಳುಹಿಸಿ
ಎಳೆದೊಯ್ದು ಚಾವಾಡಿಗೆ ಸೆಳೆದು ಪಿಚಂಡಿಯ ಬಿಗಿದು ಬೇಗನೆ
ಕಳುಹಿಸಿ ಸುದ್ದಿ ಹುಬ್ಬಳ್ಳಿಯ ಸ್ಥಳಕ್ಕೆ ||೩||

ಸುದ್ದಿ ಕೇಳಿ ಹುಚ್ಚಪ್ಪತಮ್ಮ ಅತಿ ದುಃಖದಿ ಎದಿ ಬಾಯಿ
ಗುದ್ದಿಕೊಳ್ಳುತ ಬಿದ್ದ್ಹೊರಳಿದ ಭೂಮಿಗೆ ಶೋಕದಿ ಸತಿ ಸುತ-
ರಿದ್ದರಾತ್ಮ ಬಾಂಧವರು ಬಂದರಲ್ಲೇ ರೌದ್ರದಿ-
ಸಧ್ಯಕ್ಕ್ಹೋಗಿ ಹೆಣ ಹುಗಿಯಲು ನಡೆದರು ದಗ್ಧದೀ
ಮಧ್ಯರಾತ್ರಿಯಲೆದ್ದು ಶ್ರವಕ ಮಣ್ಣ
ಮುದ್ದಿಯೊಳಗೆ ಮುಚ್ಚಿಟ್ಟ ವಾರ್ತಿಯದು
ಚೋದ್ಯವಾಯಿತು ಶಿಶುನಾಳಧೀಶನಿಗೆ
ತಿದ್ದಿ ನಿನಗೆ ನಾ ತಿಳಿಸಿದೆ ಗೆಳತಿ ||೪||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಗಲುಗನಸು
Next post ಹಾಡು-ಪಾಡು

ಸಣ್ಣ ಕತೆ

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys