ಕಾಯಬಲ್ಲೆ ನಾ ಕೃಷ್ಣ

ಕಾಯಬಲ್ಲೆ ನಾ ಕೃಷ್ಣ ಗೋಪಿಯರ
ಮನೆಗೆ ಹೋಗದಂತೆ
ಹೇಗೆ ಕಾಯಲೇ ಗೋಪಿಯರು
ಅವನ ಕಾಡದಂತೆ ?

ಸಾಕಾಗಿದೆಯೆ ದಿನವೂ ಮನೆಗೆ
ಬರುವರು ಗೋಪಿಯರು
ಶಿಕ್ಷೆಯ ನೆಪದಲಿ ಕೃಷ್ಣನ ಬಾಚಿ
ಕೆನ್ನೆಯ ಹಿಂಡುವರು!

ಸೆರಗನು ಸೆಳೆದ, ಮುಡಿಯನು ಎಳೆದ
ಎನುವರು ಕಳ್ಳಿಯರು
ಸೆರಗು ಮುಡಿಗಳ ಹುಡುಗನ ಕೈಗೆ
ಇವರೇ ಚಾಚುವರು!

ಅರಿಯದ ಕಂದ ಎಳೆದಿರಬಹುದು
ಕೈಗೆ ಸಿಕ್ಕುದನ್ನು.
ಮುಟ್ಟಿ, ಅಪ್ಪಿ, ಶಿಕ್ಷಿಸಲೆಂದೇ
ಅವರ ಎಲ್ಲ ದೂರು!

ಗೋಪಿಯರೆಲ್ಲಾ ಹಿಂಡಿ ಹಿಸುಕಿ
ಹೇಗಾಯಿತೆ ಕಂದ!
ಕಾಯಲಿ ಹೇಗೆ ಈ ಮನ್ಮಥನ
ಗೋಪೀದಾಳಿಯಿಂದ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೧೦
Next post ಪ್ರಕೃತಿ

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

cheap jordans|wholesale air max|wholesale jordans|wholesale jewelry|wholesale jerseys