ಪುಟ್ಟನ ಕಚೇರಿ

ಪುಟ್ಟನ ಮನೆ ಮುಂದೆ ಇದೇನು ಕೂಟ
ಇಷ್ಟು ಬೆಳಿಗ್ಗೆಯೆ ಊರವರ ಕಾಟ
ಕೆಲವರು ಕುಂತು ಕೆಲವರು ನಿಂತು
ಹಲವರು ಹಣಿಕಿ ಉಳಿದವರಿಣುಕಿ
ಹಾಡುತ್ತಿರುವನು ಪುಟ್ಟನು ಎಂದು
ಜನ ಬಂದಿರುವರು ಕೇಳಲು ಇಂದು
ಪುಟ್ಟನ ಗಾಯನ ಒಂದೇ ಸವನೆ
ನಡೆದಿದೆ ಯಾರದೆ ಪರಿವಿಲ್ಲದೆನೆ
ಮಂದ್ರ ಮಧ್ಯಮ ತಾರಕ ಬಿಂದಿಗೆ
ಎಲ್ಲಾ ಶ್ರುತಿಗಳು ಕೃತಿಗಳು ಒಂದಿಗೆ
ತಲೆದೂಗುತಾರೆ ಕೇಳುವ ಜನಗಳು
ಅದೆಂಥ ಭಾವ ತುಂಬಿದೆ ಇವನೊಳು
ಹರಿದರಿದು ಬರುತಿದೆ ಕಣ್ಣೀರ ಧಾರೆ
ದನಿಯೆಂಥ ದನಿಯಿತು ವ್ಹಾರೆ ವ್ಹಾರೆ
ಬಾಲಪ್ರತಿಭೆಯಿವ ಚೆಂಬೈಗೂ ಸಮ
ಇವನೆದುರು ಇನ್ನೆಲ್ಲರು ಬರೀ ಸರಿಗಮ
ಚರ್ಚೆ ಸುರುವಾಗುವುದು ರಾಗದ ಕುರಿತು
ಒಬ್ಬೊಬ್ಬರು ತಮ್ಮ ಬುದ್ಧಿಯಂತರಿತು
ಒಬ್ಬನೆಂದರೆ ಇದು ಕೇದಾರ ಗೌಳ
ಇನ್ನೊಬ್ಬನ ಹಟ ರೀತಿ ಗೌಳ
ಆಗ ಶುರುವಾಗುವುದು ಭಾರೀ ಜಗಳ
ಯಾಕೆಂದರೆ ಇದು ಮಾಯಾಮಾಳವ ಗೌಳ
ಕೆಲವರಭೇರಿ ಕೆಲವರು ಬಿಲಹರಿ
ದೇವಗಾಂಧಾರಿ ಗೌರಿಮನೋಹರಿ
ಖರಹರಪ್ರಿಯ ನಾಟಿಕುರಂಜಿ
ಆನಂದ ಭೈರವಿ ಪೂರ್ವಕಲ್ಯಾಣಿ
ಮಲಯಮಾರುತ ಪಂತುವರಾಳಿ
ಸಿಂಹೇಂದ್ರಮಧ್ಯಮ ಸಿಂಧುಭೈರವಿ
ಒನ್ಸ್ ಮೋರೆಂದು ಕೂಗಲು ಕೆಲವರು
ಟ್ವೈಸ್ ಮೋರೆಂದು ಇನ್ನೂ ಹಲವರು
ಮೋರ್ ಮೋರೆಂಬ ಗುಂಪೂ ಇತ್ತು
ಈ ಮಧ್ಯೆ ಗಾಯನ ಜೋರಾಗ್ತ ಹೋಯ್ತು
ಆಗಲೆ ಬಂದಳು ಪುಟ್ಪನ ಅಮ್ಮ
ಕೈಯಲಿ ಎತ್ಕೊಂಡು ಅಂಗಡಿ ಸಾಮಾನ್ನ
ಅಯ್ಯೋ ಕಂದಾ ಹಸಿವಾಯ್ತೇನಪ
ಯಾಕಿಂಗಳ್ತೀ ನಂದೇ ತಪ್ಪ
ಕರಕೊಂಡು ಹೋದಳು ಪುಟ್ಟನ ಒಳಕ್ಕೆ
ಕಾಲು ಕಿತ್ತರು ಶ್ರಾವಕರು ಹೊರಕ್ಕೆ
ಇಂತು ಸಂಪನ್ನ ಪುಟ್ಪನ ಕಚೇರಿ
ಹೊಟ್ಟೆಗೆ ಸೇರಲು ಮೂರ್ನಾಲ್ಕು ಪೂರಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಮ್ಮೂರ ಹೋಳಿ ಹಾಡು – ೫
Next post ಯೌವನ

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

cheap jordans|wholesale air max|wholesale jordans|wholesale jewelry|wholesale jerseys