ಕರೆ

ಇವನು
ಸಂತೆಯಲ್ಲಿ ವ್ಯಾಪಾರವಿಲ್ಲದೆ ಚಿಂತಿತನಾದ
ಬದುಕಿನ ತದುಕುವಿಗೆ ಮೈಗೊಟ್ಟ
ಬವಣೆಯ ಭಾರಕ್ಕೆ ಬೆಂಬಾಗಿದ
ದುರ್ವಾಸನೆಗಳಿಂದುಸುರು ಕಟ್ಟಿದ
ಪಾಶಗಳಿಂದ ಹೆಡೆಮುರಿ ಕಟ್ಟಿಸಿಕೊಂಡ
ದಾಸ್ಯದೊತ್ತಾಯದ ಜೀತಕ್ಕೆ ಹೆಗಲನಿತ್ತ
ಸ್ವಾತಂತ್ರ್ಯ ಸಂಕೋಲೆಗೆ ಕಾಲನಿತ್ತ
ನಾಯಿ ನರಿ ಗೂಬೆ ಗೋರಿಲ್ಲಾಗಳ
ಎಳೆದಾಟಕ್ಕೆ ನಜ್ಜು ಗೊಜ್ಜಾದ
ಮೀಸಲಡುಗೆಯ ಹಡಬೆನಾಯಿಗಿಕ್ಕಿ ಬಿಕ್ಕಿದ
ಹಣದೊಡನಾಡಿ ಹಾಣಾಹಣಿ ಹೆಣವಾದ
ಕಾಮನ ಕಣ್ಮುಚ್ಚಾಲೆಯಲ್ಲಿ ಕಣ್ಕಟ್ಟಿ
ಗೋಡೆ ಗೋಡೆ ಹಾಯ್ದು ಗಟಾರಕ್ಕೆ ಬಿದ್ದ
ಭೂತವು ಬೆಂಬತ್ತಿ ಬೇತಾಳವಾದಾಗ ತತ್ತಿಹಾಕಿದ
ನರನಾಡಿಗಳೆಲ್ಲ ಇರುಳೆಲ್ಲ ನರಳಿ ರೋಧಿಸಿದರೂ
ಹಗಲ ಹಗರಣದ ಹಡಬಿಟ್ಟಿ ಬಟ್ಟೆಗಳಲ್ಲಿ
ಮೈತೂರಿಸಿಕೊಂಡ ತನ್ನ ತಾ ಕಳಕೊಂಡ
ಹಲವಾರು ಹೆಜ್ಜೆಗಳಲ್ಲೇ ನಡೆದು
ಎಡವಿ‌ಎಡವಿ ದಾರಿ ತಪ್ಪಿದ
ಕೆಲವರು ತೋರಿಸಿದಲ್ಲಿ ತೆವಳಿ ಬವಳಿಬಿದ್ದ
ಒಲವಿನ ನೆಲೆಗಾಣದೆ ನೆಲುವಿಗೆ ಹಾರಿಹಾರಿ
ನೆಲಕಂಡು ನೊಂದು ಅವಡುಗಚ್ಚಿದ
ಸಲ್ಲದ ಸಿಂಗಾರಕ್ಕೆ ಒಲ್ಲದೆ ಅಣಿಯಾಗಿ
ಹೂಮುಡಿದು ಎಣ್ಣೆಯುರಿಸಿ ಕಾದೂಕಾದೂ
ಗಂಡ ಬಾರದೆ ಕಂಗಾಲಾದವಳಂತಾದ
ಅರ್ಥವಿಲ್ಲದ ಮಂತ್ರವೂದಿ ಅನರ್ಥದ ಹೊಗೆ‌ಎಬ್ಬಿಸಿ
ತತ್ವವಿಲ್ಲದ ತಂತ್ರದಲ್ಲಿ ತಂತಿಯಿಲ್ಲದ ತಂಬೂರಿ ಮೀಟಿದ
ದಿಕ್ಕೆಳೆದ ಕಡೆ ನಡೆದು ದಿಕ್ಕೆಟ್ಟ
ಜೀವನವು ಸಾವಿಗಿಂತ ಕಡೆಯಾದಾಗ
ಮನೆ ಮಸಣದಲ್ಲೋ ಗುಡ್ಡ ಗುಡಿಯಲ್ಲೋ
ಹೊಲ ಹಾದಿಯಲ್ಲೋ ನೆಲಜಲದಲ್ಲೋ
ಕೊನೆಗೊಮ್ಮೆ ಒಳಗಿನಾಳದಿಂದ
ಅಖಂಡ ಗೂಢಗರ್ಭಮೂಲದಿಂದ
ಕರೆಯೊಂದು ಕೇಳಿ ಬಂತು
ಈ ಕರೆಗಳಿಗೆ ಎಲ್ಲರೂ ಕಿವಿದೆರೆದಿದ್ದರೆ
ಇವನು ಕಿವುಡಾಗಿದ್ದ
ಆ ಕರೆಗೆಲ್ಲರೂ ಕಿವುಡಾಗಿದ್ದರೆ
ಇವನು ಕಿವಿದೆರೆದಿದ್ದ ಕಾಣದಿದ್ದುದಕೆ ಕಣ್ತೆರೆದಿದ್ದ
(೨೩-೪-೭೪)
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೂರ್ಯ – ಚಂದ್ರ
Next post ಗೀಳು

ಸಣ್ಣ ಕತೆ

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

cheap jordans|wholesale air max|wholesale jordans|wholesale jewelry|wholesale jerseys