ಕ್ರೂರಿಯಾಗದಿರಲಿ!

ಪ್ರಿಯ ಸಖಿ,
ಬೆಂಗಳೂರಿಗೆ ಹೊರಟಿದ್ದ ಬಸ್ಸು ಕುಣಿಗಲ್ನಲ್ಲಿ ನಿಂತು ಇಳಿಸುವವರನ್ನು ಇಳಿಸಿ ಹತ್ತಿಸಿಕೊಳ್ಳುವವರನ್ನು ಹತ್ತಿಸಿಕೊಂಡು ತಕ್ಷಣ ಹೊರಟಿದೆ. ಇದರ ಅರಿವಿಲ್ಲವ ಕಡಲೇ ಕಾಯಿ ಮಾರುವ ಹುಡುಗನೂ ಬಸ್ಸು ಹತ್ತಿ ವ್ಯಾಪಾರಕ್ಕಿಳಿದವನು ಬಸ್ಸು ಹೊರಟು ಬಿಟ್ಟಿದ್ದನ್ನು ಗಮನಿಸಿ ಗಾಬರಿಯಾಗಿ ಬಸ್ಸು ನಿಲ್ಲಿಸುವಂತೆ ಕೂಗಿಕೊಳ್ಳುತ್ತಾನೆ. ಇದನ್ನು ಕೇಳಿದ ಡ್ರೈವರ್ ಅಟ್ಟಹಾಸದ ನಗೆ ನಕ್ಕು ಬಸ್ಸೊಳಗೆ ಹತ್ತಕ್ಕೆ ಯಾವನ್ಲಾ ನಿಂಗ್ ಹೇಳ್ದವ್ನು? ಬಾ, ಬಾ ಬೆಂಗಳೂರ್ನಾಗೇ ನಿನ್ನ ಇನ್ನ ಇಳ್ಸಾದು ಎನ್ನುತ್ತಾನೆ. ಇದನ್ನು ಕೇಳಿದ ಹುಡುಗ ಮತ್ತಷ್ಟು ಗಾಬರಿಯಾಗಿ ಇಲ್ಲಣ್ಣ ಗೊತ್ತಿಲ್ದೇ ಹತ್ಬುಟ್ಟೆ ಇಳುದ್ಬುಡ್ತೀನಿ, ನಿಲ್ಸಣ್ಣ, ನಿನ್ನ ದಮ್ಮಯ್ಯ ಎಂದು ಬೇಡಿಕೊಂಡಷ್ಟೂ ಡ್ರೈವರ್ನ ಅಟ್ಟಹಾಸ ಏರುತ್ತದೆ.

ಬಸ್ಸಿನಲ್ಲಿರುವ ಜನರ ಯೋಚನೆಗಳೂ ಹತ್ತು ಹಲವು ದಿಕ್ಕಿನಲ್ಲಿ ಸಾಗುತ್ತವೆ. ಬಸ್ಸು ಹೊರಡೋದು ಗೊತ್ತಿದ್ದೂ ಯಾಕ್ ಹತ್ಬೇಕಿತ್ತು. ಅನುಭವಿಸಲಿ ಅಂತ ಒಬ್ಬನೆಂದು ಕೊಂಡರೆ ಇನ್ನೊಬ್ಬ ಪಾಪ ಅವನು ಇವತ್ತು ದುಡಿದ ದುಡ್ಡನ್ನೆಲ್ಲಾ ಮತ್ತೆ ವಾಪಸ್ಸು ಬರಲು ಟಿಕೇಟಿಗೇ ಹಾಕಬೇಕೇನೋ ಎಂದುಕೊಳ್ಳುತ್ತಾನೆ. ತಾಯಿಯೊಬ್ಬಳು ಪಾಪ ಹುಡುಗ ಏನೋ ಗೊತ್ತಿಲ್ದೆ ಹತ್ತಿದೆ, ಇಳಿಸಿಬಿಡಬಾರ್ದಾ. ಈ ಡ್ರೈವರ್ ಎಂತ ಕಟುಕ ಎಂದು ಬೈಯ್ದುಕೊಳ್ಳುತ್ತಾ ಆ ಹುಡುಗನಿಂದ ಎರಡು ರೂಪಾಯಿಯ ಕಡ್ಲೆಕಾಯಿ ತೆಗೆದುಕೊಳ್ಳುತ್ತಾಳೆ. ಮತ್ತೊಬ್ಬ ಸೂಕ್ಷ್ಮ ಮನಸ್ಸಿನವ ಡ್ರೈವರ್ನ ಕ್ರೂರ ಮುಖವನ್ನು ಕಂಡು ಅವನೊಂದಿಗೆ ಮಾತನಾಡಲಾಗದೇ ಕಂಡಕ್ಟರ್ ಬಳಿ ಪಾಪ ಅವನನ್ನು ಇಳಿಸಿ ತೊಂದರೆ ಕೊಡಬೇಡಿ ಎಂದು ಬೇಡಿಕೊಳ್ಳುತ್ತಾನೆ. ಡ್ರೈವರ್‍‍ಗೆ ಕಂಡಕ್ಟರ್ ತಿಳಿಸಿ ಹೇಳಿದರೂ ಬುದ್ಧಿ ಬರ್‍ಲಿ ಸುಮ್ನಿರು ಎನ್ನುತ್ತಾ ಅಸಡ್ಡೆ ಮಾಡುತ್ತಾನೆ.

ಡ್ರೈವರ್ ಯಾರ ಮಾತೂ ಕೇಳುವವನಲ್ಲ ಎಂದು ಅರಿವಾದ ಹುಡುಗ ಬಂದದ್ದನ್ನೆಲ್ಲಾ ಎದುರಿಸಲು ತಯಾರಾದವನಂತೆ ಮತ್ತೆ ಉತ್ಸಾಹದಿಂದ ಕಡ್ಲೆಕಾಯಿ ಮಾರಲು ಪ್ರಾರಂಭಿಸುತ್ತಾನೆ. ಅ ಹುಡುಗನ ಬಗ್ಗೆ ಕರುಣೆ ಮೂಡಿದ ಅನೇಕ ಪ್ರಯಾಣಿಕರು, ಕಡಲೇಕಾಯಿ ಖರೀದಿಸಿ ಧನ್ಯವಾದೆವು ಎಂದು ಸಮಾಧಾನದ ಉಸಿರೆಳೆಯುತ್ತಾರೆ. ಯಾವಾಗಲೋ ಮನಸ್ಸು ಬಂದೆಡೆ ಆ ಡ್ರೈವರ್ ಬಸ್ಸು ನಿಲ್ಲಿಸಿ ಮಹಾನ್ ಉಪಕಾರ ಮಾಡಿದವನಂತೆ ಮುಖ ಮಾಡಿ ಹುಂ, ಇಳಿ ಎನ್ನುತ್ತಾನೆ. ಹುಡುಗ ಡ್ರೈವರ್ನೆಡೆಗೆ ತಣ್ಣನೆಯ ನೋಟವೊಂದನ್ನು ಬೀರಿ ಸರಸರನೆ ಬಸ್ಸಿನಿಂದಿಳಿಯುತ್ತಾನೆ.

ಸಖಿ, ಡ್ರೈವರ್‍ನ ಈ ಕ್ರೌರ್ಯ, ಬಡ ಹುಡುಗನ ಅಸಹಾಯಕತೆ ಮತ್ತೆ ಮತ್ತೆ ನೆನಪಾಗಿ ಕಾಡುತ್ತವೆ. ಡ್ರೈವರ್ ತನ್ನ ಕ್ರೌರ್ಯದಿಂದ ಪುಟ್ಟ ಹುಡುಗನ ಮನ ಕ್ಷಣಕ್ಕೆ ಭೀತಿಯನ್ನುಂಟು ಮಾಡಿದೆ. ಪಾಠ ಕಲಿಸಿದೆ ಎಂದು ಬೀಗಿದರೂ ಬಸ್ಸಿನಲ್ಲಿನ ಹೆಚ್ಚಿನ ಪ್ರಯಾಣಿಕರ ಕಣ್ಣಿನಲ್ಲಿ ಅವನು ವಿಲನ್ ಆದದ್ದು ಸುಳ್ಳಲ್ಲ. ಹಾಗೇ ತನ್ನ ಅಸಹಾಯಕತೆಯಲ್ಲೂ ಉತ್ಸಾಹದಿಂದಿದ್ದ, ಬದುಕನ್ನು ಬಂದಂತೆ ಧೈರ್ಯವಿರುವ ಪುಟ್ಟ ಹುಡುಗ ಅವನಿಗರಿವಿಲ್ಲದೇ ಹೀರೋ ಆಗಿ ಬಿಡುತ್ತಾನೆ. ಡ್ರೈವರ್‍ನ ಕ್ರೌರ್ಯ ಆ ಮುಗ್ದ ಹೃದಯದಲ್ಲಿ ದ್ವೇಷದ ಬೀಜವನ್ನು ಬಿತ್ತದಿರಲಿ, ಸಮಾಜವನ್ನೇ ಪ್ರತೀಕಾರದ ತಾಣವಾಗಿಸಿಕೊಂಡು ಕ್ರೂರಿಯಾಗದಿರಲಿ ಎಂಬುದು ನಮ್ಮ ಪ್ರಾರ್ಥನೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿರುದ್ಧ ಸಾಲುಗಳು
Next post ಸೂರ್ಯ – ಚಂದ್ರ

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

cheap jordans|wholesale air max|wholesale jordans|wholesale jewelry|wholesale jerseys