ಯಾರು ನಮ್ಮ ಕರೆದರು?

ಯಾರು ನಮ್ಮ ಕರೆದರು, ಕರೆದು ಎಲ್ಲಿ ಸರಿದರು?
ನಾವು ಬರುವ ಮೊದಲೆ ನೂರು ಸೋಜಿಗಗಳ ಮೆರೆದರು?

ಯಾರು ಬೆಳಕ ಸುರಿದರು ನದಿಗಳನ್ನು ತೆರೆದರು?
ಆಕಾಶದ ಹಾಳೆಯಲ್ಲಿ ತಾರೆಗಳನು ಬರೆದರು?

ಗಾಳಿಯಾಗಿ ಹರಿದರು ಬೆಂಕಿಯಾಗಿ ಉರಿದರು?
ಕಡಲು ನೆಲವ ನುಂಗದಂತೆ ಯಾರು ಅದನು ತಡೆವರು?

ಮೂಳೆ ಚರ್ಮ ಹೊಲಿದು ನಮ್ಮ ಗೂಂಬೆ ಮಾಡಿ ಇಟ್ಟರು?
ಗೊಂಬೆಯೊಳಗೆ ಗಾಳಿ ಹರಿಸಿ ಶಾಖವನೂ ಕೊಟ್ಟರು?

ಕಣ್ಣ ಬಾಯಿ ಮೈಯ ತುಂಬ ನೂರು ಮೋಹ ಬೆಳೆದರು?
ಮೋಹದಾಳದಲ್ಲೆ ಸೃಷ್ಟಿ ಚಲನೆಯ ಕೀ ಹುಗಿದರು?

ಯಾರು ನಮ್ಮ ಕರೆದರು, ಕರೆದು ಮರೆಗೆ ಸರಿದರು?
ನಮ್ಮ ದಾರಿಯಲ್ಲಿ ಹೂವು ಚೆಲ್ಲಿ ಎಲ್ಲಿ ಹೋದರು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೨೭
Next post ಊರಮಂದಿ ದೂರವಾಗೋ ಕಾಲ ಬರುತೈತಿ

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

cheap jordans|wholesale air max|wholesale jordans|wholesale jewelry|wholesale jerseys