ಏಕೆ ಹೀಗೆ ಬೀಸುತ್ತಿರಬೇಕು ಗಾಳಿ?

ಏಕೆ ಹೀಗೆ ಬೀಸುತ್ತಿರಬೇಕು ಗಾಳಿ
ಏಕೆ ಕಡಲು ದಡ ಮೀರದೆ ನಿಂತಿದೆ ತಾಳಿ,
ನೆಲಕೆ ಏಕೆ ಮಳೆ ಹೂಡಲೆಬೇಕು ದಾಳಿ
ನಗುವ ಏಕೆ ಯಮ ಜೀವಗಳೆಲ್ಲವ ಹೂಳಿ?

ಹೇಗೆ ಚಿಮ್ಮುವುದು ಬೋಳು ಗಿಡದಿಂದ ಹಸಿರು
ಹೇಗೆ ಸೇರುವುದು ದೇಹ ದೇಹದಲಿ ಉಸಿರು?
ಯಾವುದು ಈ ವಿಶ್ಚವನೇ ಪೊರೆಯುವ ಬಸಿರು
ಚಿಕ್ಕ ಸಾಲಿನಲಿ ಹೊಳೆಯುವುದದಾರ ಹೆಸರು?

ಯಾರು ಕರೆಸುವರು ತಪ್ಪದೆ ಪ್ರತಿದಿನ ಸೂರ್ಯನ
ಯಾರು ಕಳಿಸುವರು ಬಾನಿಗೆ ಹುಣ್ಣಿಮೆ ಚಂದ್ರನ?
ಫಳ ಫಳ ಹೊಳೆಯುವ ತಾರೆಗೆ ಯಾರೋ ಕಾರಣ
ಬುಗುರಿ ಆಡಿಸುವರಾರೋ ಭೂಮಿಯ ದಿನ ದಿನ?

ಅದನು ಕಾಣುವಾ ಆಮಿಷ ಕಾಡಲಿ ಕಣ್ಣನು
ಅದನು ಕಾಣುವಾ ಆಸೆಯು ಕವಿಯಲಿ ಕಿವಿಯನು
ಅದನು ಅರಿಯುವಾ ಬಯಕೆಯು ಬರೆಸಲಿ ಹಾಡನು
ಅದರೊಳು ಬೆರೆಯುವ ಹುಚ್ಚಿಗೆ ತಿನಿಸುವ ಬಾಳನು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೩೪
Next post ಅಮ್ಮ ಸುಟ್ಟ ರೊಟ್ಟಿ

ಸಣ್ಣ ಕತೆ

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

cheap jordans|wholesale air max|wholesale jordans|wholesale jewelry|wholesale jerseys