ಬಾನಿಂದೇನೋ ಇಳಿಯುತಿದೆ

ಬಾನಿಂದೇನೋ ಇಳಿಯುತಿದೆ
ಬುವಿಯೆದೆಯೊಳಕ್ಕೆ
ಕಲ್ಪನೆ ಏನನೊ ಸೇರಿಸಿದೆ
ಕಾಣುವ ದೃಶ್ಯಕ್ಕೆ

ನದಿಯೆದೆಯಲ್ಲಿ ಮುಗಿಲಿನ ಕವಿತೆ
ಹುಣ್ಣಿಮೆ ಇರುಳಲ್ಲಿ,
ಬಾನಿನ ಹಾಡು ಮೂಡಿತು ಹೇಗೆ
ಭೂಮಿಯ ಶ್ರುತಿಯಲ್ಲಿ?

ನೋಟಕೆ ಶ್ರವಣಕೆ ತಿಳಿಯದ ಏನೋ
ಕಾಡಿದೆ ಎದೆಯಲ್ಲಿ
ಹೊಂಬಿಸಿಲಾಡಿದ, ಹಾಡಿದ ಗಾಳಿ
ಬಣ್ಣದ ಪೊದೆಯಲ್ಲಿ

ಕಾಣದ ಲೋಕದ ಕಲ್ಪತರುವಿಗೆ
ಕನಸಿತೇಕೆ ಜೀವ?
ಇದೆಯೋ ಇಲ್ಲವೊ ನಂಬಿದ ಜೀವಕೆ
ಮಧುರ ಹಾವಭಾವ

ಮರೆಗೆ ನಿಂತರೂ ಅಗೋ ನೆರಳು
ಬೇರೇನು ಸಾಕ್ಷಿ ಬೇಕು?
ಹುಡುಕುವಾಟಕ್ಕೆ ಕೊನೆಯೇತಕ್ಕೆ
ಲೀಲೆಯಷ್ಟೆ ಸಾಕು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೪೦
Next post ಪ್ರೀತಿಯೇ ಬೆಟ್ಟವಾದವನು

ಸಣ್ಣ ಕತೆ

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

cheap jordans|wholesale air max|wholesale jordans|wholesale jewelry|wholesale jerseys