ಉರಿಯುವ ಚಂಡನು ನೀಲಿನಭದಲ್ಲಿ

ಉರಿಯುವ ಚೆಂಡನು ನೀಲಿನಭದಲ್ಲಿ ಇರಿಸಿದವರು ಯಾರು?
ಹಗಲಿನ ನಾಟಕ ಮುಗಿಸಿ ಕರಿತೆರೆ ಸರಿಸುವವರು ಯಾರು?
ಅಂಧಕಾರದಲಿ ಚಂದ್ರನ ಹಣತೆಯ ಹಚ್ಚುವವರು ಯಾರು?
ಬಾನಿನ ಮೈಯನು ಮುಗಿಲ ವಸ್ತ್ರದಲಿ ಮುಚ್ಚುವವರು ಯಾರು?

ಸಣ್ಣ ಗಿಡದಲು ಬಣ್ಣದ ಹೂಗಳು, ಹಸಿರೆಗೆಂಥ ಹಾರ!
ಹಂಡೆಕುಂಬಳವ ಹೊರವುದು ಬಳ್ಳಿ, ಪ್ರೀತಿಗಿಲ್ಲ ಭಾರ
ಚಳಿಮಳೆ ಬಿಸಿಲಿನ ಸೀರೆಯ ಭೂಮಿ ಉಡುವುದೇನು ಚಂದ!
ನೀಹಾರಿಕೆ ಗ್ರಹತಾರೆಗಳ ಹಿಡಿವುದಾವ ಬಂಧ!

ಪಂಚೇದ್ರಿಯದೊಳು ಸಂಚನು ಸೃಷ್ಟಿಸಿ ನಡೆಸುವವಗೆ ಶರಣು
ಸೃಷ್ಟಿಯ ಸಂತತ ಚಲನೆಗೆ ದಾರಿಯ ಮಾಡಿದವಗೆ ಶರಣು
ಬಾನೊಳು ಬೆಳಕಿನ ದೀಪಾವಳಿಯನು ಹಚ್ಚುವವಗೆ ನಮನ
ವಿಶ್ವವನೇ ಚದುರಂಗದಾಟದಲಿ ಹೂಡಿದವಗೆ ನಮನ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೪೨
Next post ಅದೇ ಮುಖ

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

cheap jordans|wholesale air max|wholesale jordans|wholesale jewelry|wholesale jerseys