ಮರವು ತೂಗಾಡಿದವು

ಮರವು ತೂಗಾಡಿದವು ಬಳ್ಳಿ ಓಲಾಡಿದವು
ಹೂವು ನಕ್ಕವು ಕುಲುಕಿ ಮೈಯನೆಲ್ಲ,
ಮಂದಮಾರುತ ಸುಳಿದು ಗಂಧವನು ಹಂಚಿದನು
ನೀ ಬಂದೆ ಎನ್ನುವುದು ತಿಳಿಯಲಿಲ್ಲ

ನದಿ ಹಾಡಿ ಓಡಿತು, ಬೆಳುದಿಂಗಳಾಡಿತು
ಮೆಚ್ಚಿ ಸವರಿತು ಬೆಳಕು ಮುಗಿಲ ಗಲ್ಲ,
ಮಣ್ಣ ಕಣ ಕಣವೂ ಚಿನ್ನವನು ಅಣಕಿಸಿತು
ನೀ ಬಂದೆ ಎನ್ನುವುದು ಹೊಳೆಯಲಿಲ್ಲ

ಗುಡ್ಡಗಳು ಅಡ್ಡ ಕೈ ಹಚ್ಚಿ ಮಾತಾಡಿದವು
ಪಿಸುಮಾತು ಏನೆಂದು ತಿಳಿಯಲಿಲ್ಲ,
ಹಕ್ಕಿಗಳು ಸುಖವುಕ್ಕಿ ದನಿಧಾರೆ ಹರಿಸಿದವು
ನೀ ಬಂದೆ ಎನ್ನುವುದು ಹೊಳೆಯಲಿಲ್ಲ

ಹೇಗೆ ಅದು ಹೊಳೆದೀತು, ಮೈಲಿಗೆಯ ಕಳೆದೀತು
ನಾನೆಂಬ ಹಮ್ಮಿನಲಿ ಮುಳುಗಿದವಗೆ?
ತನ್ನಾಚೆ ನಗುತಿರುವ ಸೃಷ್ಟಿಲೀಲೆಗಳಿರಲಿ
ತನ್ನಂತರಂಗವೇ ಸಿಗುವುದಿಲ್ಲ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೪೬
Next post ಭೂಮಿ ಆಟದ ಮೈದಾನ

ಸಣ್ಣ ಕತೆ

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

cheap jordans|wholesale air max|wholesale jordans|wholesale jewelry|wholesale jerseys