ಕರಗುವ ಇರುಳಿನ ಹಣೆಯಲ್ಲಿ

ಕರಗುವ ಇರುಳಿನ ಹಣೆಯಲ್ಲಿ
ಮೂಡಲ ಗಿರಿಯ ಮಣೆಯಲ್ಲಿ
ಹೂಳೆಯುವ ರತ್ನದ ಹಣತೆಯನು
ಹಚ್ಚುವರಾರು ಮರೆಯಲ್ಲಿ?

ಬೆಟ್ಟವು ಬಾನಿನ ಕಡೆಗೇಕೆ
ತೊರೆಗಳು ತಗ್ಗಿನ ಕಡೆಗೇಕೆ?
ನಭದಲಿ ತೇಲುವ ನೀಲಿ ಹಂಡೆಗಳು
ಮಣ್ಣಿಗೆ ಉರುಳುವುದೇತಕ್ಕೆ?

ಹೂವನು ಚಿಮ್ಮುವ ಮುದವೇನು
ಬಾಡಿಸಿ ಕೊಲ್ಲುವ ಕುದಿ ಏನು?
ಹಗಲಲಿ ಬಿಚ್ಚಿ ಇರುಳಲಿ ಮುಚ್ಚುವ
ಕಣ್ಣುಮುಚ್ಚಾಲೆ ಕಥೆಯೇನು?

ಯಾರು, ಏನು, ಏತಕ್ಕೆ
ತಿಳಿಯದ ಮಾಯಾವ್ಯೂಹಕ್ಕೆ
ಎಲ್ಲಿವೆ ಆದಿ ಅಂತ್ಯಗಳು
ಉತ್ತರ ಸಿಗದಾ ಗೂಢಕ್ಕೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೪೮
Next post ಹಸಿದವರಿಗೂ ಎರಡು ಎಲೆಯಿರಲಿ

ಸಣ್ಣ ಕತೆ

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

cheap jordans|wholesale air max|wholesale jordans|wholesale jewelry|wholesale jerseys