ಕಟ್ಟಿದ್ದೇನು ಕುಣಿದಿದ್ದೇನು!

ಕಟ್ಟಿದ್ದೇನು ಕುಣಿದಿದ್ದೇನು
ಸಿಂಗರಿಸಿದ್ದು ಅದೇನು!
ಒಂದೇ ದಿನದ ಮಂಗಕುಣಿತಕ್ಕೆ
ಹಡೆ ವೈಯಾರ ಅದೇನು!

ಆರತಿ ಬಂತು, ಅಕ್ಷತೆ ಬಿತ್ತು
ಉಘೇ ಉಘೇ ಜನ ಘೋಷ,
ನಂದೀಕೋಲು ನೂರು ಹಿಲಾಲು
ಕುಣಿತ ಕೇಕೆ ಆವೇಶ.

ಭಜನೆ ಮುಗಿದು ಮೈ ಬಸವಳಿದು
ಕಣ್ಣಿಗಿಳಿದಿದೆ ಮಂಪರು,
ಆಗಸೆ ಬಾಗಿಲಿಗೆ ಬಂದಿತು ತೇರು
ಮುಗಿಯಿತು ಹಬ್ಬದ ಜೋರು.

ಇಷ್ಟೇ ಎಲ್ಲಾ ತೇರಿನ ಕಥೆಯೂ
ಒಂದು ದಿನದ ಮೆರೆದಾಟ,
ಯಾಕೆ ಮೆರೆಯುವಿ ತಿಳಿಯದೆ ತಮ್ಮಾ
ನಿಲ್ಲಿಸು ಹುಸಿ ಕುಣಿದಾಟ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೫೨
Next post ಕಳೆದು ಹೋದವನು

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

cheap jordans|wholesale air max|wholesale jordans|wholesale jewelry|wholesale jerseys