ಪ್ರತಿಮೆಯಾದರು

ಯಾರಿಗೂ ಕೇಳಿಲ್ಲ
ಹೇಳಿಲ್ಲ
ನಿಂತ ನಿಲುವಲಿ
ಎಲ್ಲರಿಗೂ ಕಾಣುವಂತೇ…
ವಿಧಾನಸೌಧದಾ ಎದುರಲ್ಲೇ…
ಪ್ರತಿಮೆಯಾದರು…
ಈ ನಮ್ಮ ಅಂಬೇಡ್ಕರ್‍.


ಪ್ರತಿಮೆಗೂ ಮಿಗಿಲು
ಮುಗಿಲು, ಹಗಲು-
ವಿಸ್ಮಯ ಪ್ರತಿಭೆ ಅವರದು!
ಮಲ್ಲಿಗೆ ಮನಸನು, ವಿಶಾಲ ಹೃದಯವನು…
ಕಲ್ಲು ಮಾಡಿ,
ಕೇರಿಗೆ ಸೀಮಿತ ಮಾಡಿ,
ಪ್ರತಿಮೆ ನಿಲ್ಲಿಸಿದವರು ನಾವು!!


ಸ್ವಾರ್ಥಕೆ ನಿತ್ಯ ಎಳೆ ಎಳೆ ತಂದೂ…
ಸುಮ್ಮ ಸುಮ್ಮನೆ ಹಿಗ್ಗಿಸಲೋಗಿ,
ತನ್ನ ಜನ, ತನಗೇ ಮಾನ, ಹರಾಜಾಕಿದ್ದು,
ಕೈ, ಕೈ, ಕಾಲು, ಕಾಲು, ಕನ್ನಡ್ಕ ತೆಗೆವರೆಂದೂ…
ಈ ಮೊದಲು ತಿಳಿದಿದ್ದರೆ,
ಪ್ರತಿಮೆಯಾಗುವದಾ ಬಿಟ್ಟು,
ಸ್ವರ್ಗ ಸೇರುತ್ತಿದ್ದರು…?!


ಸೂರ್‍ಯ ಕೋಟಿನ
ಬೆಳೆಕ್ಹೆಂಚು ಮಾಡಿ,
ಬಲು ಸಣ್ಣರಾದವರು
ಮೆಚ್ಚಿಸಲ್ಹೋಗಿದ್ದ ಕಂಡು-
ಹೌಹಾರಿ ನಿಂತಲ್ಲೇ…
ವಿಧಾನಸೌಧದ ಎದುರಲ್ಲೇ…
ಪ್ರತಿಮೆಯಾದರು…
ಈ ನಮ್ಮ ಅಂಬೇಡ್ಕರ್‍.


ಜಗದಗಲ
ಮುಗಿಲಗಲವನು!
ಬರೀ ಕೇರಿಗೇ…
ಸೀಮಿತಗೊಳಿಸಿದ್ದಕ್ಕೆ
ಮಮ್ಮಲ ಮರುಗಿ,
ಕೊರಗಿ,
ನಿಂತಲ್ಲೇ…
ವಿಧಾನಸೌಧದಾ ಮುಂದೆ:
ಪ್ರತಿಮೆಯಾದರು…
ಈ ನಮ್ಮ ಅಂಬೇಡ್ಕರ್‍.


ಪೂರ್ಣ ಮುಖಿ
ಚಂದ್ರವದನನ-
ಈ ಪುಟ್ಟ ಕನ್ನಡಿಯೊಳಗೆ,
ತೋರಿದ್ದ ಕಂಡು:
ಕೆಂಡಮಂಡಲವಾಗಿ
ನಿಂತಲ್ಲೇ…
ವಿಧಾನಸೌಧದ ಎದುರಲ್ಲೇ…
ಪ್ರತಿಮೆಯಾದರು…
ಈ ನಮ್ಮ ಅಂಬೇಡ್ಕರ್‍.


ನಮ್ಮವರು: ಮೇಲಿನವರ ಅಂಜಿಸಲು…
ಹೇಗೆಗೋ ಬಿಂಬಿಸಲ್ಹೋಗಿ…
ಸ್ವಯಂ ಪ್ರಭೆ ಅರಿದೆ,
ಬಿಂಬವ ಪ್ರತಿಬಿಂಬವಾಗಿಸಿದ್ದು ಕಂಡೂ
ಮೌನದಲಿ,
ಪ್ರತಿಮೆಯಾದರು…
ವಿಧಾನಸೌದದ ಎದುರಲ್ಲೇ…
ಈ ನಮ್ಮ ಅಂಬೇಡ್ಕರ್‍.


ಪ್ರತಿ ಹೆಜ್ಜೆ ಹೆಜ್ಜೆಗೂ…
ವಾದ, ಪ್ರತಿವಾದಕೂ…
ಈ ನಮ್ಮ ಅಂಬೇಡ್ಕರ್‍ ಬೇಕು!
ಭಾರತದ ಸಂವಿಧಾನ ಬೇಕೇ ಬೇಕು!
ಬದುಕಿದ್ದಾಗ: ಸವರ್ಣೀಯರ ಕಾಟ…
ಮೀಸಲಾತಿಯ ಪರದಾಟ…
ಬೇಸತ್ತು, ಬೌದ್ಧ ಧರ್ಮ ಸ್ವೀಕಾರ!!
ಸತ್ತಾಗ: ಈಗ ತನ್ನವರ ಕಾದಾಟ!
ಹೊಲೆ, ಮಾದಿಗನೆಂಬ ಜಗ್ಗಾಟ…
ಸಹಿಸಲಾಗದೆ… ಪ್ರತಿಮೆಯಾದರು!!
ಈಗ ಒಡೆಬಾರದಶ್ಟೇ…
ಪ್ರತಿಮೆಯನು…
ಪ್ರತಿಭೆಯನು…
ಭಾಜನು,
ಭುವಿ,
ಬೆಳಕನ್ನುಽಽ…
ಅಶ್ಟೇ…ಽಽ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಫಲ
Next post ನಮ್ಮೂರ ಹೋಳಿ ಹಾಡು – ೭

ಸಣ್ಣ ಕತೆ

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

cheap jordans|wholesale air max|wholesale jordans|wholesale jewelry|wholesale jerseys