ಕಾಲಪುರುಷನ ಕುರಿತು

ಬಾರಯ್ಯ ಬಾ! ನೀನಿರದೆ, ನಾವಿದ್ದು ಫಲವೇನು?
ಬಾರಯ್ಯ ಬಾ!! ಶಕಪುರುಷ…
ಅದೆಶ್ಟು ಕಣ್ಣಬಣ್ಣ?! ಪರಿವರ್ತನೆ, ನಿರೀಕ್ಷೆ, ಕುತೂಹಲಯ್ಯಾ?!
ಈ ನಿನ್ನ ಬರುವಿಕೆಯಲ್ಲಿ?!
ರಾತ್ರಿಯೆಲ್ಲ ನಿದ್ದಿಲ್ಲದೆ, ನಿನ್ನ ಆಗಮನಕೆ ಸ್ವಾಗತವಯ್ಯ!
*

ಬರುವೆ! ಬಂದೇ ಬರುವೆ!!  ಸಂಕ್ರಮಣ ರಾಮ, ನೀ ಚೆನ್ನಿಗರಾಮನಲ್ಲವೇ?
ವರ್ಷ ವರ್ಷ… ಅದೆಂಥಾ ಹರ್ಷವಯ್ಯ ನಿನಗೆ??
ನೀ ಕತ್ತೆ, ಕುದುರೆ, ಹಂದಿ, ನಾಯಿ, ಕಾಗೆ, ಹುಲಿ, ಸಿಂಹನೇರಿ
ಬರುವೆಯಲ್ಲಯ್ಯಾ?!
ನೀ ಸಾಮನ್ಯನೇನಯ್ಯ?! ಏನನೇರಿ ಬಂದರೂ, ಕುಸ್ತಿ ಒಗೆವೆನಲ್ಲಯ್ಯ?!
*

ನೀ ಬರುವ ಹಾದಿಲಿ: ಕೊಲೆಂಟು, ಸುಲಿಗೆವುಂಟು, ರಕ್ತರಂಜಿತ,
ವರ್ಣರಂಜಿತ, ವಿನಾ ಕಾರಣ ಅವಮಾನ, ಅಪಮಾನವುಂಟು!
ಯುದ್ಧ ಘೋಷಿತ, ಸುನಾಮಿ, ಲೈಲಾ, ಗುಡುಗು, ಸಿಡಿಲು,
ಅಬ್ಬಬ್ಬಾ… ವಿಮಾನ, ಅಗ್ನಿದುರಂತ, ತೈಲ ಸೋರಿಕೆ…
ಎನೆಲ್ಲ ಉಬ್ಬರವಿಳಿತ! ಬರೀ ವಿಭ್ರಮ ಭ್ರಮರಿ ವಿದ್ವುಂಸ ಕುಕೃತ್ಯಗಳೇನು?!
*

ದೇಶದಾ ಉದ್ದಗಲಕೂ ಏನೆಲ್ಲ ಲೇಲೆ, ಹಳವಂಡಗಳಯ್ಯ??
ಎಳೆ ಗರ್ಭಗಳ ಅರಾತುರಿ ಸೀಳಿದ ಖೂಳ ರಕ್ಕಸ ನೀಽ…
ಕಟ್ಟೆಯೊಡೆದು, ಸುದರ್ಶನ ಚಕ್ರವಿಡಿದು ಝೇಂಕರಿಸುತ್ತಾ
ರಾಹು ಮಂಡಲಗಳ ದಾಟಿ, ವೃತ್ತಾಕಾರದಲಿ ನೀ ಬಾರಯ್ಯ! ಬಾ…
*

ಎನು ನಿನ್ನ ಲೀಲೆಯೋ? ಮಾಯೆಯೋ ಜನನ… ಮರಣವೋ?
ನಾಳೆ ನಾಡಿದ್ದು ನಿನ್ನೆ ಮೊನ್ನೆಗಳ ಎಡತಾಕಿಸುತ್ತಾ
ಸ್ಥಾವರ ಜಂಗಮ, ಸಂಗಮಗಳ ಜಪಿ ಜಪಿಸುತ್ತಾ
ಕಂಪ್ಯೂಟರ್‍, ಟೀವಿ, ಇಂಟರ್‌ನೆಟ್, ಐಟಿ, ಬಿಟಿಗಳಲ್ಲಿ ನಿನ್ನ ಜಾಲವೋ…
*

ಸೆಲ್‌ಪೋನಿಂದಲೇ ಗದೆ ಬಿಟ್ಟು, ಬಾಣತೊಟ್ಟು, ಮಕ್ಕಳ್ಹೆರುವ
ಸಹಸ್ತ್ರ ಪುರುಷ ಬಾರಯ್ಯ! ಬಾ…! ನವ ಶತಮಾನದ ತೇಜಾಽ…
ಯೇನೆಲ್ಲ ಅವತಾರ, ಲೇಲೆ, ವಿನೋದ, ಭೀಕರವಯ್ಯ?!
ಸುಮ್ಮನಿರೆ ಉಂಡಬಾನ, ಕುಡಿದ ನೀರು ಪಥ್ಯವಾಗದೇನಯ್ಯ?!
*

ಅಯ್ಯ ದುರುಳ ದುರ್‍ಯೋಧನ, ದುಶ್ಯಾಸನ, ಶಕುನಿ, ಕಂಸ, ಕೀಚಕ,
ರಾವಣ, ಕೊಂಡಿಮಂಚಣ್ಣ, ಮಲ್ಲಪ್ಪಶೆಟ್ಟಿ, ಮೀರ್‌ಸಾಧಿಕ್…
ಕುಂಭಕರ್ಣ, ಸೂರ್ಪನಖಿ, ಮಂಥೆರೆ, ಮಂಡೋದರಿ, ಅಹಲ್ಯೆರೆಲ್ಲ
ಅರಮನೆ, ಸೆರೆಮನೆಯೊಳಗಿಲ್ಲ!
ಮನೆ, ಮನಗಳಲ್ಲಿ, ರಕ್ತಾ ಬೀಜಾಸುರರಾಗಿ, ಮೃತ್ಯುಂಜಯರಾಗಿ
ವಿಜೃಂಭಿಸಿಹರಲ್ಲ?!
ನಿನ್ನ ಆಗಮನ, ನಿರ್ಗಮನ ಮಾತ್ರ ಎದ್ದು ಕಾಣುವುದು!
*

ಅಯ್ಯೋ ಕಗ್ಗತ್ತಲೆ ತುಂಬಿ ತುಳುಕಿ, ಹಗಲೇ ಕೊಲೆ, ಸುಲಿಗೆ, ದರೋಡೆ,
ಮಾನಭಂಗವೇ?? ಶಾಸಕರ ಕತ್ತೆ, ಕುದುರೆ ವ್ಯಾಪಾರವೇ…
ಕಾಲಪುರುಷನ ಹೆಸರಲಿ, ಸಾಲೆ, ಕುತ್ತೆ, ಗದ್ದುಗೆ ಹಿಡಿದು, ಗುದ್ದಾಟ
ನಡೆಸಿಹರಲ್ಲ?! ವಿಶ್ವಾಸ ಮತಕೆ ಷಡ್ಯಂತ್ರ ಬಳಸಿಹರಲ್ಲ…
ಉದ್ಧಾರ, ಪ್ರಗತಿ, ಸುಧಾರಣೆ, ಸಹಾಯ ಹಸ್ತ, ಬರೀ ಕನವರಿಕೆಗಳೇ ಆದವಲ್ಲಾ…
ಬುದ್ಧ, ಬಸವ, ಅಂಬೇಡ್ಕರ್‍, ಮದರ್‍ ತೆರೀಸಾರಂಥವ್ರಿನ್ನು ಬರಲಿಲ್ಲ ಯಾಕೆ??
*

ಈ ನಿನ್ನ ಆಗಮನಕೆ, ತಳಿರು ತೋರಣಕಟ್ಟಿ,
ರಾತ್ರಿಯೆಲ್ಲ ಕುಡಿದು, ಕುಣಿದು, ಕುಪ್ಪಳಿಸಿ,
ಸಿಡಿಮದ್ದು ಸಿಡಿಸುವುದೂ ವ್ಯರ್ಥ…
ಇದು ಹೀನ ಸಂಸ್ಕೃತಿಯಲ್ಲದೆ ಇನ್ನೇನು?
ನೀ ಬಂದು ಕಿಸುದು ಗುಡ್ಡೆ ಹಾಕಿದ್ದಾರೂ ಇನ್ನೇನು?!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೇಡ ಸರಸ
Next post ನಮ್ಮೂರ ಹೋಳಿ ಹಾಡು – ೯

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

cheap jordans|wholesale air max|wholesale jordans|wholesale jewelry|wholesale jerseys