ದಿನಮಾನ ಬಲು ಕೆಟ್ಟವೋ

ದಿನಮಾನ ಬಲು ಕೆಟ್ಟವೋ ಸದ್ಗುರುಪುತ್ರ
ನಿನಗಾವು ಬಂದು ತಟ್ಟವೋ ||ಪ||

ಚಿನುಮಯಾತ್ಮಕವಾದ ಐದಕ್ಷರವು
ತನ್ನೊಳು ಜಪಿಸಿಕೊಂಡಿಹ
ಮನುಜರೂಪವ ಕಳೆದು ಮಹಿಮೆಯ
ತಿಳಿದ ಪುರುಷನಿಗೇನು ಆಗದು ||ಅ.ಪ||

ದೇಹದೊಳಿದ್ದರೇನು ಜೀವನ ಕಾಯ
ಲೋಹಕೆ ಬಿದ್ದರೇನು
ಸಾವುನೋವಿನ ಭಾವ ತಿಳಿಯದೆ
ಜಾವಕೊಮ್ಮೆ ಓಂ ನಮಃ ಶಿವಾಯೆಂದು
ಭಾವದಲಿ ನುಡಿಯೇ ಕಲಿಕರ್ಮದೊಳು ಮಹ-
ದೇವ ಮೆಚ್ಚುವ ಸತ್ಯ ಮಾತಿದು ||೧||

ವಿಷಯವಾಡಿದರೇನಾಯ್ತು ಈ ಲೋಕವು
ಹುಸಿಯನ್ನುವುದೇ ಗೊತ್ತು
ವಸುಧಿಯೊಳು ಶಿಶುನಾಳಧೀಶನ
ಎಸೆವ ಸೇವಕನಾಗಿ ಜಗದಿ
ಮಸಿದ ಪ್ರಣವಶಸ್ತ್ರ ಕೈಯೊಳು
ಕೊಸರದಂದದಿ ಹಿಡದು ನುಡಿಯಲು ||೨||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾನಾರೆಂಬುದು ನಾನಲ್ಲಾ
Next post ಮೂಕನಾಗಿರಬೇಕೋ ಜಗದೊಳು

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

cheap jordans|wholesale air max|wholesale jordans|wholesale jewelry|wholesale jerseys