ಕವಿಗಳ ಕಷ್ಟ

ಅಯ್ಯೋ ಈ ಕವಿಗಳ ಕೆಲಸ ಬಲು ಕಷ್ಟ
ಹಿಡಿಯಷ್ಟು ಸಾಮಗ್ರಿಯಿಂದ
ಪೂರೈಸಬೇಕು ಎಲ್ಲರ ಇಷ್ಟ
ಇಲ್ಲಿ ಇಲ್ಲದ್ದನ್ನು ಸೃಷ್ಟಿಸಬೇಕು
ಬ್ರಹ್ಮನಿಗೆ ಸವಾಲಿನಂತೆ ಪ್ರತಿ ಸೃಷ್ಟಿಸಬೇಕು
ಕಪ್ಪು ಕರಾಳ ಕುರೂಪದೊಳಗೇ
ಸುಂದರ ಲೋಕ ತೆರೆದು ತೋರಿಸಬೇಕು
ದಿನದಿನವೂ ಹೊಸಹೂಸದನ್ನೇ ಕಾಣಬೇಕು
ಮೂರನೆ ಕಣ್ಣಿಂದ
ಕಂಡದ್ದು ಶಬ್ದಜಾಲದ ಮೋಡಿಯಲ್ಲಿ
ಬಣ್ಣಿಸಬೇಕು ಬಣ್ಣ ಬಣ್ಣ
ಅವರ ಕೈಯಲ್ಲೇನಿದೆ ಬಂಡವಾಳ

ಅದೇ ಹಿಡಿಯಷ್ಟು ಚಿಕ್ಕಿಗಳು
ತಟ್ಟೆಗಳಂಥ ಸೂರ್ಯಚಂದ್ರರು
ಅದೇ ಗಿಡ ಮರ ಬಳ್ಳಿಗಳು
ಅವುಗಳಲೊಂದಿಷ್ಟು ಮೊಗ್ಗು ಕಾಯಿ ಹೀಚು ಹಣ್ಣು
ಅವುಗಳ ಸುತ್ತಾಡುವ ಚಿಟ್ಟೆಗಳು
ಗಿಳಿ ಕೋಗಿಲೆ ಕಾಜಾಣ ಪಾರಿವಾಳ ನವಿಲುಗಳು
ಕೊಳದಲ್ಲಿ ನೀರಿದ್ದರೆ ಅಲ್ಲೊಂದಿಷ್ಟು
ಕಮಲಗಳು ಹಂಸಗಳು (ಈಗೀಗ ಇವು ಕನಸುಗಳು)
ಇವನೆಲ್ಲ ಅಂಗಾಂಗಗಳಲ್ಲಿ
ಮೆತ್ತಿಕೊಂಡ ಮಾನಿನಿಯರು ಚೆಲುವೆಯರು
ಕವಿಗಳ ನಿರಂತರ ಸ್ಪೂರ್ತಿಯ ಚಿಲುಮೆಗಳು
ಇವರ ಬಿಟ್ಟರೆ ಅಥವಾ ಇವಳ ಬಿಟ್ಟರೆ
ಕವಿಗಳಿಗೆ ಉಳಿಯುವುದೇನು ಮಣ್ಣು

ಸ್ವಲ್ಪ ಕಣ್ಣು ಆಚೆ ಹಾಯಿಸಿದರೆ
ನದಿಗಳ ಬಳುಕೋ ಕಡಲಿನ ಮಿಡುಕೋ
ಅದೇ ನೆಲ ಜಲ ಅದೇ ಭೂಮಿ ಬಾನು
ಗಿರಿಸಾನು- ಬಾನಲ್ಲಷ್ಟು ಗಾಳಿಯ ಗೊಂದಲ

ಮೋಡ ಮಿಂಚುಗಳ ಗದ್ದಲ ಅಪರೂಪಕ್ಕೆ
ಅದೇ ಅರುಣೋದಯ ಸೂರ್ಯೋದಯ
ಸೂರ್ಯಾಸ್ತಗಳ ತಿರುಗು ಮುರುಗು
ಇನ್ನೇನಿದೆ ಕವಿಗಳ ಕೈಗಳಲ್ಲಿ ಮಣ್ಣು ಮಸಿ
ಉಪಮೆ ರೂಪಕಾದಿಗಳ ನುಣ್ಣು ನುಸಿ
ವೇದಗಳ ಕಾಲದ ಉಷೆ ಸೂರ್ಯೋಪಾಸನೆ
ಗಿಡಮರಗಳ ನಡುವೆ ಬೆಂಕಿ ತುಪ್ಪದ ವಾಸನೆ
ಅಲ್ಲಿಂದ ಹಿಡಿದು ಇಲ್ಲಿಯವರೆಗೂ
ಕವಿಗಳಿಗೆ ಅವೇ ಸಾಮಗ್ರಿಗಳು
ನಿಸರ್ಗ ನೀಡುವ ಪರಿಕರಣಗಳು
ಅವುಗಳಿಂದಲೇ ಹೆಣೆಯಬೇಕು
ನವರಸಾದಿಗಳ ಕುಣಿಕೆಗಳ
ಮಾನವನ ನೂರಾರು ಭಾವಭಣಿತೆಗಳ
ಅಯ್ಯೋ ಈ ಕವಿಗಳ ಕೆಲಸ ಬಲು ಕಷ್ಟ
ಹಿಡಿಯಷ್ಟು ಅವೇ ಹಳಸಲು ವಸ್ತುಗಳಿಂದ
ಪೂರೈಸಬೇಕು ಎಲ್ಲರ ಇಷ್ಟ

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರೇಮ
Next post ಮತ್ತದೇ ಪ್ರಶ್ನೆ

ಸಣ್ಣ ಕತೆ

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

cheap jordans|wholesale air max|wholesale jordans|wholesale jewelry|wholesale jerseys