ಹುರಮುಂಜಗೇಡಿ

ಹುರಮುಂಜಗೇಡಿ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಹಳ್ಳಿಯಲ್ಲಿ ಚಿಕ್ಕ ತಕ್ಕಡಿ ಅಂಗಡಿ ಒಂದು. ಬೆಲ್ಲ –  ಇಂಗು – ಜೀರಿಗೆ, ಚುರಮರಿ – ಪುಠಾಣಿ ಮಾರುವ ಕಿರಾಣಿ ಅಂಗಡಿ. ಹಳ್ಳಿಯೊಳಗಿನ ಗಿರಾಕಿಗಳು ಉಡಿಯಲ್ಲಿ ಜೋಳವನ್ನೋ ಕುಸುಬೆಯನ್ನೋ ತಂದು ಅಂಗಡಿಕಾರನ ಮಾಪಿನಲ್ಲಿ ಅಳೆದುಹಾಕಿ ತಮಗೆ ಬೇಕಾದ ಸಾಮಾನು ಕೊಂಡುಕೊಳ್ಳುವುದು ವಾಡಿಕೆ. ದುಡ್ಡು ತಂದು ವ್ಯಾಪಾರ ಮಾಡಿಕೊಳ್ಳುವವರು ಬಹಳ ಕಡಿಮೆ.

ಹಬ್ಬ ಹುಣ್ಣಿಮೆ ದಿವಸ ಇಲ್ಲವೆ ಸೋಮವಾರ ದಿವಸ ಗಿರಾಕಿಗಳ ಗೊಂದಲ ಹೆಚ್ಚಿಗಿರುತ್ತದೆ. ಸರತಿಯ ಮೇಲೆ ಗಿರಾಕಿಗಳು ವ್ಯಾಪಾರ  ಗಿಟ್ಟಿಸಬೇಕಾಗುತ್ತದೆ. ಒಂದು ಸಾರೆ ಗೌಡರ ಮನೆಯಲ್ಲಿ ತೊತ್ತುಗೆಲಸಮಾಡುವ ಬಂಡೆವ್ವ ಮುದಿಕೆ ಉಡಿಯಲ್ಲಿ ಜೋಳ ಕಟ್ಟಿಕೊಂಡು ಬಂದು ಸರತಿ ಕಾಯುತ್ತ ನಿಂತೇ ನಿಂತಳು. ಮುಂದಿನ ಗಿರಾಕಿಗಳು ಹೊರಟು ಹೋದ ಬಳಿಕ, ಮುದಿಕೆ ತನ್ನ ಉಡಿಯೊಳಗಿನ ಜೋಳವನ್ನು ಅಳೆದು ಹಾಕಿದಳು.

“ಏನು ಕೊಡಲಿ” ಎಂದನು ಅಂಗಡಿಕಾರ.

“ಗೌಡತಿ ಏನೋ ಹೇಳಿದ್ದಾಳೆರೀ” ಎಂದು ನೆನಪು ಮಾಡಿಕೊಳ್ಳಹತ್ತಿದಳು.

“ಅಲ್ಲ” ಮುದಿಕೆಯ ಸೊಲ್ಲು.

“ಇಂಗು ಜೀರಿಗೆ ?”

“ಅದು ಅಲ್ಲ.”

“ಶುಂಠಿ, ಮೆಣಸು ?”

“ಊಂ! ಹು !”

“ಅಡಿಕೆ, ಕಾಚು ?”

ಅಲ್ಲವೆನ್ನುವಂತೆ ಮುದಿಕೆ ಗೋಣುಕೊಡಹಿದಳು. ಅಂಗಡಿಕಾರನಿಗೆ ಬೇಸರಾಯಿತು. ಹಿಂದೆ ನಿಂತ ಗಿರಾಕಿಗಳು ಅವಸರ ಮಾಡತೊಡಗಿದ್ದನ್ನು ಕಂಡು ಸಿಟ್ಟಿನಿಂದ ಆ ಮುದಿಕೆಗೆ “ಕೇಳಿದ್ದಕ್ಕೆಲ್ಲ ಅಲ್ಲವೆನ್ನುತ್ತ ಮತ್ತೇಕೆ ನಿಂತೆ ? ನಿನ್ನ ಜೋಳ ತೆಗೆದುಕೊಂಡು ಹೋಗು, ಹುರಮುಂಜಗೇಡೀ” ಎಂದು ಗದ್ದರಿಸುವಷ್ಟರಲ್ಲಿ – “ಅದೇ ನೋಡೋ ಅಪ್ಪಾ, ನನಗೆ ಬೇಕಾಗಿದ್ದು ಹುರಮುಂಜ. ಕೊಟ್ಟುಬಿಡು ನನ್ನಪ್ಪಾ, ಹೋಗುತ್ತೇನೆ. ಗೌಡತಿ ಬಯ್ದಾಳು ಬಹಳ ಹೊತ್ತಾಯ್ತು ಎಂದು ಮುದಿಕೆ ನುಡಿಯಲು, ಅಂಗಡಿಕಾರನು ಕಾಗದದಲ್ಲಿ ಹುರಮುಂಜ ಪೊಟ್ಟಣ ಕಟ್ಟಿಕೊಟ್ಟನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಳೆ
Next post ಮಿಂಚುಳ್ಳಿ ಬೆಳಕಿಂಡಿ – ೧೬

ಸಣ್ಣ ಕತೆ

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

cheap jordans|wholesale air max|wholesale jordans|wholesale jewelry|wholesale jerseys