ನಮ್ಮೂರ ಹೋಳಿ ಹಾಡು – ೯

ಕಾಮ ನೀನು ಧೂಮವಾದಿ
ಸೋಮನಾಥನ ಕಣ್ಣಿಗೆ
ಪ್ರೇಮದಾ ನುಡಿ ಏನು ಹೇಳಿದಿ
ಕಾಮಿನಿ ರತಿ ದೇವಿಗೆ

ನಿನ್ನ ಪೋಲುವೆ ಪುರುಷರು
ಜಗದೊಳಿನ್ನೂ
ಹುಟ್ಯಾರೆಂದಿಗೆ?
ನನ್ನ ಮುತ್ತೈದೆ ತನಕೆ
ಭಂಗ ತಂದ್ಯಾ ಇಂದಿಗೆ ||೧||

ಮಾರ ನಿನ್ನ ರೂಪ ನೋಡಿ
ಸೈರಿಸದೀ ಅಮರ್‍ಯಾರೋ
ದೂರಿ ಎಲ್ಲರೂ
ಶಿವನ ಕಣ್ಣಿಗೆ ಮಾರುಗೊಟ್ಟ
ಪಾಪತ್ಮರೂ ||೨||

ಸ್ಮರನೆ ನಿನ್ನಯ ಮನಕೆ
ತಾರಕನುಪದ್ರವ ಕೊಟ್ಟನೆ
ಹರಿವಿರಂಚಿಯೂ
ಗುರುಬೃಹಸ್ಪತಿ
ಕರೆದು ಪೇಳಿದರ್‍ಯೋಚನೆ ||೩||

ಮೋಸದಿಂದಲಿ
ಭಾಷೆಗೊಂಡರು
ಈಸನಗ್ನಿಗಣ್ಣಿಗೆ ನಾಶಗೈದನು
ಗುರುವರನು ಬಹು
ದೊರೆಯಾದನು ಭೂಮಿಗೆ ||೪||

ಕಡು ಚೆಲುವ ಕಂದರ್ಪ
ನಿನ್ನಯ ಮಡದಿ ರತಿಯಳ ದುಃಖವಾ
ಬಿಡುವಳೋ ಸೈ
ಗಡಗಡ ನೇ ತಾ
ಹುಡಿಯೊಳಗೆ ಹೊರಳಾಡುತಾ ||೫||

ಮಾರ ಬಾಣಕೆ ಮನು – ಮುನ್ಯಾದಿಯ
ದಾರಿ ತಪ್ಪಿಸಿ ಮುತ್ತಿದೆ|
ಮೂರು ಲೋಕದಿ ನಿನ್ನ
ಮಿಕ್ಕುವರಾರು
ಕದನದೊಳಿಂದಿಗೆ ||೬||

ಭೂಮಿಯೊಳುತ್ಪತ್ಯವೆಂಬುದು
ಕಾಮ ನಿನ್ನಿಂದಲ್ಲದೇ!
ನೀ ಮರಣ ಹೊಂದಿದರೆ
ಜಗತ್ರಯ ತಾ
ಮುಳಿಗಿ ಹೋಯಿತಲ್ಲದೆ ||೭||

ಕ್ಷಿತಿಯೊಳಗೆ ಪತಿವ್ರತಾ
ಶಿರೋಮಣಿಯಾ|
ರತಿ ಎಂಬ ಚೆಲುವೆಯಾ
ಪತಿವಳಿದ ರಂಡೆತನವ ವಹಿಸಿ
ಕ್ಷಿತಿಗೆಯಾದಳು ಪಾಪಿಯಾ ||೮||

ಕಾಲಕಾಲಾಂತರದಿ ರತಿಯಾ
ತಾಳಿಕರಿಮಣಿಯ ತೆಗೆಯದೆ
ಪಾಲನೇತ್ರನ ದಯದಿ
ಬಾಲೆ ನಿನ್ನನು ನೆನೆಲದೆ ||೯||

ನೆನಪಿದಾಕ್ಷಣ ಮನಸಿಜನು ಎಂದೆನೆಸಿ
ರತಿಯಳ ಪಾಲಿಸೋ|
ತನು ಕಳೆದರೂ ಮನದಿಗೂಡಿ
ಜೀವ ಜಗತ್ರಯವನು ಪಾಲಿಸೋ ||೧೦||

ಕ್ಷಿತಿಗೆ ರತಿ ಮನ್ಮಥರಿಬ್ಬರೂ
ಪತಿ ಸೋಮೇಶನ ಕರುಣದಿ |
ಸಕಲನುಚರಾಚರೆಗೆವುಪ
ಸಮ ರತಿಯ ಗೂಡುತಾ ಸೌಖ್ಯದಿ ||೧೧||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಲಪುರುಷನ ಕುರಿತು
Next post ಗುಬ್ಬಾರೆ

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

cheap jordans|wholesale air max|wholesale jordans|wholesale jewelry|wholesale jerseys