ಗಂಡ ಹೆಂಡಿರ ಕದನ

ಗಂಡ ಹೆಂಡಿರ ಕದನ

ಗಂಡ ಹೆಂಡಿರ ಕದನನನ್ನೀಸಾಹೇಬ ಹಾಗೂ ಬಡೇಮಾ ಎಂಬ ಇಬ್ಬರು ಗಂಡಹೆಂಡಿರಿದ್ದರು. ನನ್ನೀ ಸಾಹೇಬನು ಹೆಸರಿಗೆ ತಕ್ಕಂತೆ ತೆಳ್ಳಗಿನ ಕುಳ್ಳನೇ ಆಗಿದ್ದನು. ಅದರಂತೆ ಬಡೇಮಾ ಕೂಡ ಹೆಸರಿಗೆ ಒಪ್ಪುವ ಹಾಗೆ ಮೇಲೆತ್ತರದ ದುಂಡಮೈಯವಳೇ ಆಗಿದ್ದಳು. ಅಂಥ ಇಜ್ಜೋಡಿನ ಸಂಸಾರವೂ ಸಾಗಿಯೇ ಬಂದಿತ್ತು. ಆದರೆ ಹಲವು ಸಾರೆ ಅವರಲ್ಲಿ ವಿರಸಪ್ರಸಂಗಗಳು ಬರುತ್ತಲೆ ಅವರಲ್ಲಿ ಬಾಯಿಗೆ ಬಾಯಿ, ಕೈಗೆಕೈ ಹತ್ತಿ ಕದನಗಳಾಗುತ್ತಿದ್ದವು. ಆದರೆ ಗಂಡಹೆಂಡಿರ ಜಗಳ ಉಂಡು ಮಲಗುವವರೆಗಷ್ಟೇ ಅಲ್ಲವೇ ?

ಬಾಯಿಗೆ ಬಾಯಿ ಹತ್ತಿ ಜಗಳಾಡಿದ್ದು ಸಾಕಾಗದೆ, ನನ್ನೀಸಾಹೇಬನು ಸಿಟ್ಟಿನ ಭರದಲ್ಲಿ ಹೆಂಡತಿಯನ್ನು ಒಳಿತಾಗಿ ಥಳಿಸಬೇಕೆಂದು, ಒಂದು ಬಡಿಗೆಯತ್ತಿ ಆಕೆಯ ಮೈಮುಟ್ಟಹೋಗಿ ಹೊಡೆಯಲನುವಾದನು. ಅಷ್ಣರಲ್ಲಿ ಹೆಂಡತಿ ಆತನನ್ನು ಎದುರಿಸಿ ಆತನ ಕೈಯೊಳಗಿನ ಬಡಿಗೆಯನ್ನು ನಿರಾಯಾಸವಾಗಿ ಕಸಿದುಕೊಂಡು ಜಂತಿಯಲ್ಲಿ ತುರುಕಿಬಿಡುವಳು. ಅದು ಕುಳ್ಳನಾದ ನನ್ನೀ ಸಾಹೇಬನಿಗೆ ನಿಲುಕದಂತಾಗುವದು. ಆ ಕಾರಣದಿಂದ ಅವರ ಜಗಳವು ಮೊಂಡವಾಗಿಬಿಡುವದು.

ಒಮ್ಮೊಮ್ಮೆ ಬಡೇಮಾನಿಗೆ ಸಿಟ್ಟು ಬಂದಾಗ ಆಕೆ ಬಾಗಿಲಿಕ್ಕಿ ಗಂಡನನ್ನು ಅದೇ ಬಡಿಗೆಯಿಂದ ಬಡಿಯುವಳು. ಹೆಂಡತಿ ಬಡೆಯುವಳೆಂದರೂ ಗಂಡನ ಬಾಯ ಅಬ್ಬರವೇ ಹೆಚ್ಚು. ಅದನ್ನು ಕೇಳಿದವರಿಗೆ ಅನಿಸುವುದು – “ಗಂಡನೇ ಬಾಗಿಲು ಹಾಕಿ ಹೆಂಡತಿಯನ್ನು ಜಿಗಿಜಿಗಿದು ಬಡಿಯುತ್ತಿದ್ದಾನೆ. ಅಂತೆಯೇ ದನಿ ತೇಕುತ್ತದೆ.”

ಹೆಂಡತಿ ಎಡಗೈಯಿಂದ ಗಂಡನ ರಟ್ಟೆಹಿಡಿದು ಮಗ್ಗುಲಿಗೆ ನಿಲ್ಲಿಸಿ, ಬೆನ್ನ ಮೇಲೆ ಬಡಿಗೆಯೇಟು ಹಾಕುವಳು. ಇನ್ನೇನು ಏಟು ಬೀಳುವುದಿನ್ನು ಎನ್ನುವ ಕ್ಷಣದಲ್ಲಿ – “ಎಷ್ಟಿರಬೇಕು ನಿನ್ನ ಸೊಕ್ಕು” ಎಂದು ಚೀರುವನು. ಅದು ಮುಗಿಯುವಷ್ಟರಲ್ಲಿ ಬಡಿಗೆಯೇಟಿನ ಸಪ್ಪಳ ! ಆಮೇಲೆ – “ನಿನ್ನ ಜೀವ ಉಳಿಸುವದಿಲ್ಲ ಇನ್ನು” ಎಂದು ಗುಡುಗುವನು. ತರುವಾಯ ಇನ್ನೊಂದು ಏಟು. ಅನಂತರ – ನಿನ್ನನ್ನು ಕೊಂದು ಹಾಕಿದರೂ ನನ್ನ ಸಿಟ್ಟು ಇಳಿಯದು” ಎನ್ನುತ್ತ ಬೇರೊಂದು ಏಟು ತಿನ್ನುವನು.

ಬಾಗಿಲು ಹಾಕಿಕೊಂಡಿರುವದರಿಂದ ಅವರ ಬಡಿದಾಟ – ಚೀರಾಟಗಳನ್ನು ಕೇಳಿ, ನೆರೆಹೊರೆಯವರು ನೆರೆಯುತ್ತಿದ್ದರೂ ಅವರನ್ನು ಬಿಡಿಸುವುದು ಯಾರಿಗೂ ಸಾಧ್ಯವಾಗುತ್ತಿರಲಿಲ್ಲ. ತುಸು ಹೊತ್ತು ನಿಂತುಕೊಂಡು – “ನನ್ನೀಸಾಹೇಬನು ಹಿಡಿಯಾಳು ಆಗಿದ್ದರೂ ಅವನಿಗೆ ಸಿಟ್ಟು ಬಂದಾಗ ಯಾರಿಗೂ ಆಟೋಪವಲ್ಲ. ಹೆಂಡತಿಗೆ ಸಾಯುವಂತೆ ಹೊಡೆಯುತ್ತಾನೆ” ಎನ್ನುತ್ತ ಸಾಗಿ ಹೋಗುವರು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚೈತ್ರ
Next post ಮಿಂಚುಳ್ಳಿ ಬೆಳಕಿಂಡಿ – ೩೪

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

cheap jordans|wholesale air max|wholesale jordans|wholesale jewelry|wholesale jerseys