ದೇವ ನೀನೈತಂದೆ

ನನ್ನೆದೆಯ ಬಾಗಿಲನು ಮುಚ್ಚಿ ನಿದ್ರಿಸುತಿದ್ದೆ
ಜೀವನದಿ ತಿರುಳಿಲ್ಲವೆಂಬ ಭ್ರಮೆಯೊಳಗೆ
ದೇವ ನೀನೈತಂದು ಬಾಗಿಲನು ಬಡಿಯೆ ನಾ
ಸಿಡುಕಿನಿಂದಲೇ ಕೇಳ್ದೆ “ಯಾರು ಅದು” ಎಂದು!   ೧

ಮೌನದಲಿ ಮತ್ತೊಮ್ಮೆ ಶಬ್ದ ಮಾಡಲು ನೀನು
ನಾನೆದ್ದೆ ಕೋಪದಲಿ ಕೆಂಡದಂತಾಗಿ
“ಯಾರಿವನು-ನಿದ್ರೆಯಲಿ ಭಂಗ ತಂದಿಹ ಧೂರ್ತ”
ಎನುತ ಚಿಂತಿಸಿ ಬಂದು ಬಾಗಿಲನು ತೆರೆದೆ!   ೨

ನಿನ್ನ ನೋಡುತಲೆನ್ನ ಕೋಪ ಕಣ್ಣೀರಾಯ್ತು,
ನಿನ್ನ ಮುಗುಳ್ನಗೆ ಮಿಂಚಿ ನನ್ನ ಮನ ಸೆಳೆಯೆ
ಮೌನದಲಿ ಹೃದಯದಲಿ ತಳಮಳದಿ ತಪಿಸಿದೆನು
ನೀನೊಳಗೆ ಬರಬೇಕು ಎಂಬುದೆನ್ನಿಚ್ಫೆ!   ೩

ನಸುನಕ್ಕು ಚಣಕಾಲ ಒಳಗೆ ದಿಟ್ಟಿಸಿ ನೋಡಿ
ಮುಂದೆ ಸಾಗಿದೆ ನೀನು ಹೃದಯದೊಲವೆ
ನಿನ್ನ ಪುರಾಗಮನಕಾಗಿ ಕಾಯುತಲಿರುವೆ
ಎದೆಯ ಬಾಗಿಲ ತೆರೆದು ಹೊಸ್ತಿಲಲಿ ನಿಂದು!   ೪
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬರಹವೆಂಬ ಮುತ್ತು
Next post ಬಸನಿಂಗನ ಮಾತು ಕೇಳಿ

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

cheap jordans|wholesale air max|wholesale jordans|wholesale jewelry|wholesale jerseys