ಮಹಾತ್ಮರ ಸೆರೆ

ಓ, ಮಹಾತ್ಮನೆ, ನಿನ್ನ ಬಂದಿಸಿಟ್ಟಿಹರೆಂದು
ಹಲರು ತಿಳಿದಿಹರು, ದಿಟ; ಆದರದು ತಪ್ಪೆಣಿಕೆ:
ಬಂಧನವ ಬಯಸಿ ಬರಮಾಡಿಕೊಂಡಿಹೆ; ಜನಕೆ
ಬಂಧನವೆ ಬಿಡುಗಡೆಗೆ ಹೆದ್ದಾರಿಯೊಂದೆಂದು
ತೋರಿಸಲು. ಜಗ ಜನಾಂಗಗಳೆಲ್ಲ ತಾವಿಂದು
ತಮ್ಮ ನಾಯಕರಿತ್ತ ಕುರುಡಾಣತಿಯ ಪಿಡಿದು
ತಾವಣ್ಣ ತಮ್ಮಂದಿರೊಬ್ಬರೊಬ್ಬರ ಕಡಿದು
ನಿರಪರಾಧಿಗಳಾದ ತಾಯ್ ಮಕ್ಕಳನು ಕೊಂದು
ಈ ಹೊಲ್ಲ ಯುದ್ಧ ನಡಸುತಿರೆ, ಪಾಪದ ಫಲಕೆ
ನಮ್ಮನೂ ಭಾಗಿ ಮಾಡಲು ಬಂದ ಭಾರತದ
ಅಣ್ಮರಿಗೆ ನೀನೊರೆದೆ: “ಸಲ್ಲದೀ ಭ್ರಾತೃವಧ;
ನಮ್ಮ ನೆರವಿದಕಿಲ್ಲ.”-ಇದನು ಸಾರುವ ಹಕ್ಕೆ
ನಾಡ ಬಿಡುಗಡೆಯೆಂದೆ-ಇದಕಾಯ್ತು ನಿನಗೆ ಸೆರೆ!
ಸತ್ಯದ ಅಹಿಂಸೆಯಾ ಸಂಗ್ರಾಮಕದುವೆ ಕರೆ!
(೧೯೪೨ರ ಆಗಸ್ಟಿನಲ್ಲಿ ಮಹಾತ್ಮ ಗಾಂಧಿಯವರು ಬಂಧನಕ್ಕೆ ಗುರಿಯಾದಾಗ)
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪುಚ್ಚೆ
Next post ಇಳಾ – ೧೦

ಸಣ್ಣ ಕತೆ

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

cheap jordans|wholesale air max|wholesale jordans|wholesale jewelry|wholesale jerseys