ಜನತೆಯೊಂದೆ

ಚರಿತೆಯ ಚಮತ್ಕಾರದಿಂದೊಡೆಯಿತೆಮ್ಮ ಜನ
ಎರಡಾಗಿ: ಆದರೊಂದೇ, ನಿಜಕು ಜನತೆಯೊಂದೆ:
ಹೊರಗಣಿನಿಸಿನ ಭೇದ ಭೇದವೇ? ಆ ತಂದೆ
ಇಬ್ಬರಿಗು ದೈವವೆನೆ, ಒಪ್ಪದಿದೆ ಮೂಢ ಮನ.

ಒಂದು ಮುಸ್ಲಿಮರೊಂದೆ: ಇದನರಿಯಬೇಕು ಜನ:
ಮೆಲಿನಾ ಬಾನೊಂದೆ; ನಡೆವ ನೆಲ ತಾನೊಂದೆ;
ಕುಡಿಯುವಾ ನೀರೊಂದೆ;-ಬಸಿರೊಂದೆ, ಉಸಿರೊಂದೆ:
ಅರ್ತಿಯಿಂದಾರಯ್ಯೆ ಅರಿವುದೀ ಒಂದುತನ.

ಇಂತಿರಲು, ಪುಟ್ಟ ಭೇದವ ಬೆಟ್ಟದನಿತೆಣಿಸಿ,
ತಾವಣ್ಣ ತಮ್ಮದಿರು ಎಂಬ ನಂಟನು ಮರೆದು,
ತಾಯ ಸೆರೆಯನು ಬಿಡಿಪ ಕರ್ತವ್ಯವನು ತೊರೆದು,
ಆತ್ಮವನು ಮಿಸುಕಿ ಮಮಕಾರಭೂತವ ತಣಿಸಿ

ಭ್ರಾತೃವಧ ಗೈದು ಕೆನ್ನೀರಿನಲಿ ಕೈತೊಳೆಯೆ
ಫಲವೇನು? ‘ಛಿಃ!’ ಎನದೆ ಭಾರತವ ಇಳೆಗೆ ಇಳೆಯೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚಿಂತೆ
Next post ಇಳಾ – ೯

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

cheap jordans|wholesale air max|wholesale jordans|wholesale jewelry|wholesale jerseys