ಗಾಂಧೀಜಿಗೆ

ನೂರಐವತ್ತೈದು ವರುಷಗಳು ದಾಸ್ಯದಲೆ
ಬಿದ್ದು ಭಾರತ ತನ್ನ ಆತ್ಮವನೆ ಮರೆತಿಹುದು
ತನ್ನ ಶಕ್ತಿಯಲಿಂದು ಇನಿತಾದರೂ ಅದಕೆ
ನಂಬುಗೆಯು ಉಳಿದಿಲ್ಲ! – ಕೂಪದಲಿ ಉರುಳಿಹುದು!
ಮತ್ತೆ ನಮ್ಮೀನಾಡು ಕತ್ತಲಿಂ ಹೊರಗೆದ್ದು
ಬೆಳಕಿನಲಿ-ಸ್ವಾತಂತ್ರ್‍ಯ ಜ್ಯೋತಿಯಲಿ ನಲಿಯುವುದು
ಉಂಟೇನು ಎಂದೆನುವ ಶಂಕೆಗಳು ಎದ್ದೆದ್ದು
ಮನವ ಹಿಂಡುತಲಿಹುವು-ಹೃದಯ ಸಿಡಿಯುತಲಿಹುದು!

ಹೊರಗೆನಿತು ಕುತ್ತಗಳು ಬಂದರೂ ಬರಬಹುದು
ಆತ್ಮವನು ಕತ್ತಲೆಯ ಮುಸುಕು ಮುತ್ತದ ಹಾಗೆ
ತನ್ನ ತೇಜೋಬಲವ ಹೆಚ್ಚಿಸುತ ಮುನ್ನಡೆದು
ತನ್ನಲೇ ತಾ ನಂಬಿ ನಿಜವನರಿಯುವ ರೀತಿ
ಬೋಧಿಸಿದ ವಿಶ್ವಗುರು ಗಾಂಧೀಜಿ ನಿನ್ನಡಿಗೆ
ಕನ್ನಡದ ಕೂಸೊಂದು ತರುತಿಹುದು ಕಿರುಪ್ರಣತಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾಲಿಗೆ ಜಾರಿದರೆ?
Next post ಗಝಲ್

ಸಣ್ಣ ಕತೆ

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

cheap jordans|wholesale air max|wholesale jordans|wholesale jewelry|wholesale jerseys