ಯಾರದು ಯಾರದು ಯಾರದು?

ಯಾರದು, ಯಾರದು, ಯಾರದು
ತಿಳಿಯಲು ಏತಕೆ ಬಾರದು?

ಗಂಧದ ಮರದಲಿ ನಂದದ ಪರಿಮಳ
ಲೇಪಿಸಿದವರಾರು?
ಮಂದಾರದ ಹೂಬಟ್ಟಲ ಬಂಧವ
ರೂಪಿಸಿದವರಾರು – ಗಿಡದಲಿ
ಛಾಪಿಸಿದವರಾರು?

ಬೆಟ್ಟದ ಮೈಯಲ್ಲೆಲ್ಲೋ ಸಂದಿಯ
ಇಟ್ಟ ಧೀರ ಯಾರು?
ಒಂದೊಂದೇ ಹನಿ ನೀರಿನಲಿ – ನದಿ
ಹರಿಸಿದವರು ಯಾರು – ಸಾಗರ
ತೆರೆಸಿದವರು ಯಾರು?

ಹತ್ತದ ಆರದ ಕೆಂಡದ ಉಂಡೆಯ
ಬಾನಿಗಿಟ್ಟರಾರು?
ಹತ್ತುವ ಆರುವ ಶಶಿಯನು ನಭದಲಿ
ಬಿತ್ತಿದವರು ಯಾರು – ಬೆಳೆಸಿ
ಸುತ್ತಿಸುವರು ಯಾರು?

ಯಾರಾದರೂ ನೀನಾಗಿರು ಗೂಢವೆ
ಶರಣು ನಿನಗೆ ನಾವು
ಕಾಣದೆ ಇದ್ದರು ಕಾಪಾಡುವ ಹೊಣೆ
ಹೊತ್ತಿಹ ಧಣಿ ನೀನು-ನಿನಗೆ
ಸಂತತ ಋಣಿ ನಾವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೫೮
Next post ಸರತಿಯಲಿ ನಿಂತವರು

ಸಣ್ಣ ಕತೆ

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

cheap jordans|wholesale air max|wholesale jordans|wholesale jewelry|wholesale jerseys