ಗರಿಯೊಡೆದ ಹಕ್ಕಿ

ಬಣ್ಣ ಬಣ್ಣದ ಹೂಗಳು, ಗಾಜಿನ ಚೂರುಗಳು
ಚಿತ್ತಾರದ ಗರಿಗಳು
ತರಾವರಿ ಬೆಣಚುಕಲ್ಲು, ಸಿಂಪಿ
ಕವಡಿಗಳ ತಂದು ಸಂಭ್ರಮಿಸುವ-

ಮುಂಜಾವಿನ ಮಂಜು
ಮುಸ್ಸಂಜೆಯ ಕೆಂಪು ಪ್ರೀತಿಸುವ-
ಆಕಾಶದಂಗಳದೊಳು ಹಾರಾಡಿ
ಏನೆಲ್ಲಾ ಬಾಚಿ ತಬ್ಬಿಕೊಳ್ಳುವ
ಕನಸುಗಳಿಗೆ ಕಾವೂಡಿಸುವ
ಹದಿಹರೆಯದ ವಯಸ್ಸು, ಮುದಗೊಳ್ಳುವ ಮನಸ್ಸು.

ನೋಡ ನೋಡುತಿರೆ
ನೆಲದೆದೆಯಿಂದ ಆಕಾಶದಂಗಳಕೆ ನೆಗೆತ
ಸಂತಸ, ಭಯ, ಬೆರಗು, ವಿಸ್ಮಯಗಳ ಆವರಿಕೆ.
ಸಡಗರ ಸಂಭ್ರಮಗಳ ಬಳ್ಳಿ ಹೆಣೆಯುವಿಕೆ
ಮಾತು ಮೂಕವಾಗಿ ಮೌನವೇ ಮಾತನಾಡುತಾ
ಕನಸುಗಳು ಬೀಜೊಡೆಯುವಿಕೆಗೆ
ಉತ್ಸಾಹದ ಪನ್ನೀರು–
ಹದನಾದ ನಾಡಿ ಬಡಿತದ
ಗರಿಯೊಡೆದ ಹಕ್ಕಿ ನಾನೀಗ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೊಸಿಲಿಲ್ಲದ ಬಾಗಿಲು
Next post ಬೇಡ

ಸಣ್ಣ ಕತೆ

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

cheap jordans|wholesale air max|wholesale jordans|wholesale jewelry|wholesale jerseys