ನಾ ನಿನ್ನ ಮಗ ನಗಗೇಡು ಮಾಡಬ್ಯಾಡ

ನಾ ನಿನ್ನ ಮಗ ನಗೆಗೇಡು ಮಾಡಬ್ಯಾಡ ಈ ಜಗದೊಳಗೆ ||ಪ||

ನಾ ನಿನ್ನ ಮಗನು ಅಹುದೆನ್ನುವ ಮಾತಿದು
ಎನ್ನ ಗುರುವಿನುಪದೇಶ ವಚನದಿಂ
ಮುನ್ನ ತಿಳಿದು ಮಹೇಶ ಮಂತ್ರ ಜಪ ತನ್ನೊಳಗಿರುತಿಹೆ
ಕುನ್ನಿ ಜನರ ಹಂಗಿನ್ನಾಯತಕ ಭಯ ಚೆನ್ನ ಶ್ರೀಗುರುವೆ ||೧||

ತಾಯಿ ತಂದೆಗಳ ಇಂದ್ರಿ ವಿಕಾರದಿ
ಕಾಯ ಜನಿಸಿ ಅದರೋಳ್ ಮನಮೋಹಿಸಿ
ನೋವು ಬ್ಯಾನಿಯಿಂದಾಯಾಸಪಡುತಿರೆ
ಸಾವಿಗಂಜಿ ಬಾಯಾರಿ ಬಳಲುತಿರೆ
ಜೀವದ ಪರವಿಯ ಬಿಟ್ಟಾಚರಿಸುವೆ ನೀ ರಕ್ಷಿಸು ಮಹಾದೇವ ದಯಾನಿಧೆ ||೨||

ಸಾರಲೇನು ಸಂಸಾರ ವಿಷಯ ಸುಖ
ಮೂರು ದೇಹದೊಳು ಹೇರಿ ಕಳುಹಿದ ಜೀವದ್ಯಾವಾರ
ಮರತು ವರಪಾರಮಾರ್ಥಲೊಳು ನಾ ಬ್ಯಾರಿರುತಿರೆ
ಧಾರುಣಿಯೊಳು ಶಿಶುನಾಳಧೀಶನ
ಆಧಾರ ಹಿಡಿದು ಆನಂದವಾದೆ ||೩||
* * * *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾಹಿ ಪರಮದಯಾಳು ಕೃಪಾಕರ
Next post ಕರುಣ ಬಾರದೇನೋ ಸದಾಶಿವ

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

cheap jordans|wholesale air max|wholesale jordans|wholesale jewelry|wholesale jerseys