ನಾವು ಮನುಜರು

ನಾವು ಸಾಮಾನ್ಯರು
ಕಡಿಯುತ್ತೇವೆ ಕುಡಿಯುತ್ತೇವೆ
ತಿನ್ನುತ್ತೇವೆ ಮಲಗುತ್ತೇವೆ
ಬಾಧೆಗಳಿಂದ ಮುಲುಗುತ್ತೇವೆ
ಹಸಿಯುತ್ತೇವೆ ಹುಸಿಯುತ್ತೇವೆ
ನುಸಿಯುತ್ತೇವೆ ಮಸೆಯುತ್ತೇವೆ
ಸಂದುಗಳಲ್ಲಿ ನುಸುಳುತ್ತೇವೆ
ಸಿಕ್ಕಷ್ಟು ಕಬಳಿಸುತ್ತೇವೆ
ಸಿಗಲಾರದ್ದಕ್ಕೆ ಹಳಹಳಿಸುತ್ತೇವೆ

ಕನಸುಗಳ ಹೆಣೆಯುತ್ತೇವೆ
ನನಸಾಗದೆ ದಣಿಯುತ್ತೇವೆ
ಪರದೆಗಳಲ್ಲಿ ಕುಣಿಯುತ್ತೇವೆ
ಕಾಣದುದರ ಬೆದರಿಕೆಗೆ ಮಣಿಯುತ್ತೇವೆ

ಹೊರಗೆ ಬಂದು ಬೀದಿಗಳಲ್ಲಿ
ನಿಸೂರಾಗಿ ನಡೆಯುತ್ತೇವೆ
ಗುಂಪಿನಲ್ಲಿ ಗೋವಿಂದಾ
ಸೀದಾ ಸಾದಾ ಸಾಚಾತನಗಳಿಗೆ
ನಾವೇ ಹಕ್ಕುದಾರರು
ನ್ಯಾಯ ನೀತಿ ಧರ್ಮಗಳಿಗೆ
ನಾವೇ ವಾರಸುದಾರರು
ಪೋಜು ಕೊಡುವ ಸರದಾರರು
ಪರರನ್ನು ಹೇಸುತ್ತೇವೆ
ಅಲ್ಲಿ ಇಲ್ಲಿ ಮೂಸುತ್ತೇವೆ
ಹಣಕ್ಕೆ ಹಡದಿ ಹಾಸುತ್ತೇವೆ
ಕಂಡವರ ಬೆಳೆಯ ಮೇಸುತ್ತೇವೆ
ಕಂಡು ಕೇಳಿದರೆ ಇಲ್ಲೆಂದು ವಾದಿಸುತ್ತೇವೆ
ರುಚಿಗಳನ್ನೇ ಬಯಸುತ್ತೇವೆ

ವಾಸನೆಗಳ ಹಿಂಬಾಲಿಸುತ್ತೇವೆ
ಕಡುಕೊಂಡು ಬಿದ್ದಾಗ ಹಲ್ಲು ಕಿಸಿಯುತ್ತೇವೆ
ಹೊರಳುತ್ತೇವೆ ನರಳುತ್ತೇವೆ

ಯಾರಿಗೆ ಬೇಕು ಕಷ್ಟ ನಷ್ಟ
ಸಾವು ನೋವು ಅನಿಷ್ಟ
ಅವುಗಳಿಂದ ದೂರ ಓಡುತ್ತೇವೆ
ಮೈ ಉಳಿಸಲು ಗೊಣಗಾಡುತ್ತೇವೆ
ಜೀವ ಉಳಿಸಲು ಹೆಣಗಾಡುತ್ತೇವೆ

ಚಟ ವ್ಯಸನಗಳು ನಮ್ಮ ಜೀವ ಬಂಧುಗಳು
ಅದಕ್ಕಾಗಿ ಬಿಟ್ಟೇವು ಜೀವ
ಸೋಮಾರಿತನ ಸುಳ್ಳು ತಗುಲುಗಳು
ನಮ್ಮ ಜಾಯಮಾನ
ಅದರಲ್ಲೇ ಸಾಗುತಿದೆ ದಿನಮಾನ

ಸಣ್ಣ ಸಣ್ಣದಕೆ ಸೆಣಸುತ್ತೇವೆ
ಕಚ್ಚಾಡುತ್ತೇವೆ ಬಡಿದಾಡುತ್ತೇವೆ
ನಾಯಿಗಳೂ ನಾಚುವಂತೆ
ಪುಕ್ಕಟೆ ಸಿಕ್ಕರೆ ಮುಕ್ಕುರುತ್ತೇವೆ
ಹರಕೊಂಡು ತಿನ್ನುತ್ತೇವೆ
ಕಾಗೆಗಳೂ ಬೆದರುವಂತೆ

ಏನೇನೂ ಕಿಸಿದಿಲ್ಲವಾದರೂ
ಮಾನ ಸನ್ಮಾನ ಪದವಿ ಪ್ರಶಸ್ತಿಗಳಿಗೆ
ಕೈ ಚಾಚುತ್ತೇವೆ ಬಾಚುತ್ತೇವೆ
ಪ್ರಚಾರ ನಮಗಲ್ಲದೆ ಇನ್ನಾರಿಗೆ
ಗೆದ್ದೆತ್ತಿನ ಬಾಲ ಹಿಡಿದು ಹಾಕಿ ಜೈಕಾರ
ಬೇಳೆ ಬೇಯಿಸಿಕೊಳ್ಳುತ್ತೇವೆ
ಗಾಳಿ ಬಂದಂತೆ ತೂರಿಕೊಳುತ್ತೇವೆ

ಹೆರರ ಚಪ್ಪರ ಉರಿಸಿ
ಮೈಕೈ ಕಾಯಿಸಿಕೊಳ್ಳುತ್ತೇವೆ
ಹೇಳುತ್ತಾ ಹೋದರೆ ನಮ್ಮ ಕಥನ
ಸಣ್ಣವು ಭಾರತ ರಾಮಾಯಣ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೆಂಡತಿ
Next post ಉಸ್ತಾದರು

ಸಣ್ಣ ಕತೆ

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys