ವಿಧಿ

ಹೇಳಿರಲಿಲ್ಲಿವೆ ನಾನು ನಿಮಗೆ
ಅವನಿರುವುದೆ ಹಾಗೆ
ಅವನ ಕೆಣಕಬೇಡಿರಿ ಎಂದು

ಅವನೇನು ಹುಚ್ಚನಲ್ಲ ಹೆಡ್ಡನೂ ಅಲ್ಲ
ಪ್ರೀತಿಯ ನೆಪದಲ್ಲಿ
ತಲೆ ಸಡಿಲಾದವನಲ್ಲ
ವಂಶಪಾರಂಪರ್ಯವಲ್ಲ
ಅವನ ಪೂರ್ವಜರಲ್ಲಿ
ಹೀಗೆ ಯಾರಿಗೂ ಇದ್ದಿರಲಿಲ್ಲ
ಅವನಷ್ಟಕ್ಕೆ ಬಿಟ್ಟರೆ ಅವನು
ಯಾರಿಗೇನೂ ಮಾಡುವುದಿಲ್ಲ

ಮಾತು ಬಯ್ಗಳದಂತೆ
ನಿಮಗೆ ಅನ್ನಿಸಬಹುದು
ಅವನ ರೀತಿ ಬೇರೆ-
ಪದಗಳನ್ನು ಹಣ್ಣಿನಂತೆ
ಕಚ್ಚುತ್ತಾನೆ
ಕಲ್ಲಿನಂತೆ ಎಸೆಯುತ್ತಾನೆ
ಜಗಲಿಯಲ್ಲಿ ಕುಳಿತು ವಾಕ್ಯಗಳನ್ನು
ನೂಲಿನಂತೆ ನೇಯುತ್ತಾನೆ
ಬೀಡಿಯ ಹೊಗೆಯಂತೆ
ಉಗುಳುತ್ತಾನೆ ಅರ್ಥದ
ದಟ್ಟ ಮೋಡಗಳನ್ನು

ದೇಶವಿದೇಶ ಸುತ್ತಿದವನಲ್ಲ
ಬಿಹಾರ ಬಂಗಾಳ ಒರಿಸ್ಸ
ಕಾಶ್ಮೀರ ಹಿಮಾಚಲಪ್ರದೇಶ
ಪಂಜಾಬ ಗುಜಾರಾತ ಮರಾಠ
ಎಲ್ಲಿಗೂ ಹೋಗಿಲ್ಲ
ಬೆಲ್ಚಿ ಭೋಪಾಲ ಭಾಗಲ್ಪುರ
ಮೀನಾಕ್ಷಿಪುರ ಕಾಮಾಟಿಪುರ ತಿರುವನಂತಪುರ
ಚಾರ್ಮಿನಾರ್ ಕುತುಬ್‌ಮಿನಾರ್ ಶ್ರವಣಬೆಳಗೂಳ
ಹಳದೀಘಾಟ ರಾಜಘಾಟ ತಾಳೀಕೊಟೆ
ಜಲಿಯನ್‌ವಾಲಾಬಾಗ್
ನೋಡಿದವನಲ್ಲ
ಗಾಂಧಿ ನೆಹರು ಪಟೇಲ ಜಿನ್ನ
ಶೇಖ್‌ಅಬ್ದುಲ್ಲ ಇಂದಿರಾಗಾಂಧಿ ಸಂಜಯಗಾಂಧಿ
ಫೂಲನ್ ದೇವಿ ಹಾಜಿಮಸ್ತಾನ
ಮೊರಾರ್ಜಿ ದೇಸಾಯಿ ಕಾಂತಿದೇಸಾಯಿ ವಾಜಪೇಯಿ
ಅಕ್ಬರ್ ಆಶೋಕ ತುಘಲಕ
ಚರಣ್‌ಸಿಂಗ್ ಸ್ವರಣ್‌ಸಿಂಗ್ ಭಿಂದ್ರಾನ್‌ವಾಲೆ
ರಾಜನಾರಾಯಣ್ ಅಮಜದ್‌ಖಾನ್
ಖಾನ್ ಅಬ್ದುಲ್ ಗಫಾರ್‌ಖಾನ್
ಡಾಕ್ಟರ್ ರಾಮ ಮನೋಹರ ಲೋಹಿಯಾ
ಯಾರನ್ನೂ ಕಂಡವನಲ್ಲ
ಆದರೂ ಅವನು ಹೇಳುವುದರಲ್ಲಿ ಸುಳ್ಳಿಲ್ಲ
ಎಲ್ಲ ಕಡೆ ಹೋಗಿದ್ದಾನೆ
ಎಲ್ಲ ನೋಡಿದ್ದಾನೆ
ಎಲ್ಲ ಕಂಡಿದ್ದಾನೆ

ಯಾರು ನಂಬಿದರೆಷ್ಟು ಬಿಟ್ಟರೆಷ್ಟು
ಮಹಾತ್ಮಾ ಗಾಂಧಿ ತಾನೇ ಎಂದು
ಕಿತ್ತೊಗೆದಿದ್ದನು ಅಂಗಿಯನ್ನು
ದಂಡಿಯಾತ್ರೆ ಕೈಗೊಳ್ಳುವೆನೆಂದು
ನಡೆದು ಹೋಗಿದ್ದನು ಕುಂಬಳೆಗೆ
ಅದೆಷ್ಟೋ ಬಾರಿ ಅನ್ನನೀರು ಬಿಟ್ಟು
ಉಪವಾಸ ಮಲಗಿದ್ದನು
ಗಾಂಧಿಯ ಕೊಲೆಯಾದಂದು
ತಾನೇ ಸತ್ತ ಎಂದುಕೊಂಡಿದ್ದನು
ನಂತರ ನಾಥೂರಾಮ್ ಗೋಡ್ಸೆಯನ್ನು
ಗಲ್ಲಿಗೇರಿಸಿದಾಗ
ತಲೆಬಾಗಿಸಿ ನಿಂತವನು ಇವನೇ!

ಕೊಲೆ ಸುಲಿಗೆ ಅತ್ಯಾಚಾರ ಅಹಿಂಸೆ
ಕ್ಷಾಮ ದಾಮರ ರೋಗ ರುಜಿನು ಮಹಾಯುದ್ಧ
ಎಲ್ಲ ವಿಧಿಗೂ ಬದ್ಧ
ನಡು ಮಧ್ಯಾಹ್ನದ ಸೂರ್ಯನನ್ನು
ಬಿಡುಗಣ್ಣಿನಿಂದ ನೋಡಿ ನಿಲ್ಲುವನು
ಎಂಥ ಸತ್ಯಕ್ಕೂ ಸಿದ್ಧ
ಆದರೂ ಯಾವ ದೇಶ ತಾನೆ
ಇಬ್ಬರು ಸೂರ್ಯರನ್ನು ಸಹಿಸುವುದು?
ಇವನು ಈಗಾಗಲೆ
ಅಂಧನಾಗತೊಡಗಿದ್ದಾನೆ !
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಾರುಡಿ
Next post ಜೇನು – ಸಕ್ಕರೆ

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

cheap jordans|wholesale air max|wholesale jordans|wholesale jewelry|wholesale jerseys