ಫಕೀರಪ್ಪನ ಕತೆ

ಯಾರೂ ಹೇಳಬಲ್ಲರು ಕತೆಗಳನ್ನು. ಆದರೆ ಫಕೀರಪ್ಪನ ಶೈಲಿಯೇ
ಬೇರೆ. ಹೇಗೆ ಕೇಳುಗರ ಅಸಕ್ತಿಯನ್ನು ಕೆರಳಿಸಬೇಕು.
ಎಲ್ಲಿ ತಡೆಹಿಡಿಯಬೇಕು, ಯಾವಾಗ ವೀಳಯದೆಲೆಗೆ ಎಷ್ಟು
ಮೆಲ್ಲಗೆ ಸುಣ್ಣ ಸವರಬೇಕು -ಇದೆಲ್ಲ ಅವನೊಬ್ಬನಿಗೇ ಗೊತ್ತು.
ರಾತ್ರಿ ಸರಿಯುತ್ತಿದ್ದಂತೆ ಕತೆಯನ್ನು ಸಸ್ಪೆನ್ಸಿನಲ್ಲಿ-ಮತ್ತು
ನಮ್ಮನ್ನು ಭಯದಲ್ಲಿ-ನಿಲ್ಲಿಸಿ. ಫಕೀರಪ್ಪ ತಂಬಾಕಿನ ರಸ ಉಗುಳಲು
ಅಂಗಳದಾಚೆಗೆ ಹೋಗುವವ. ಅವನು ಮರಳಲು ಕಾದಂತೆ
ನಾವು ಇನ್ನಾರಿಗೂ ಕಾದ ನೆನಪಿಲ್ಲ.

ಫಕೀರಪ್ಪ ಈಗಿಲ್ಲ. ಒಂದು ಮುಂಜಾನೆ ಪಾಪ
ಕಾರಡ್ಕದ ಕಾಡಿನಲ್ಲಿ ಸತ್ತು ಬಿದ್ದಿದ್ದ. ಕೊಲೆಯೊ? ಆತ್ಮಹತ್ಯೆಯೊ?
(ಕಾರಣ ಇವನಿಗೂ ಅಸ್ತಿತ್ವದ ಸಮಸ್ಯೆಗಳಿದ್ದುವು.) ಹಸಿದ
ಯಕ್ಷಿಯೊಬ್ಬಳು ಗಬಾಯಿಸಿದಳೊ ಇವನನ್ನು? ಹಲವು ಜನ
ಹಲವು ವಿಧ ಹೇಳಿದರು. ಆದರೆ ನಿಜಕ್ಕೂ ತಾನು
ಹೇಗೆ ಸತ್ತೆ, ಎಷ್ಟು ಸ್ವಾರಸ್ಯಕರವಾಗಿ ಸತ್ತೆ ಎ೦ದು ಹೇಳುವುದಕ್ಕೆ
ಫಕೀರಪ್ಪ ತಾನೆ ಎಲ್ಲಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸತ್ತಮನ
Next post ಬೃಂದಾವನಪತಿ

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

cheap jordans|wholesale air max|wholesale jordans|wholesale jewelry|wholesale jerseys