ಭಗ್ನ ಹೃದಯ

ತ್ರಿಪುರ ದಹನವದಾಯ್ತು ಲಂಕೆಯನು ಸುಟ್ಟಾಯ್ತು
ಎನಿತೆನಿತೊ ರಾಜ್ಯಗಳು ಭಷ್ಮವಾದೊ!
ಚಾರಿತ್ರ್‍ಯ ಲೇಖಕನ ಅಂಕೆಸಂಕೆಗಳೆಲ್ಲ
ತೋರುವುವು ಭಸ್ಮಾಸುರ ಮಹತ್ವವ!!

ಯಾರ ಕಾಣಿಪುದೆಂತು, ಯಾರು ನೋಡುವರೆಂತು
ಬೆಂದ ಹೃದಯದ ತಾಪ-ಶೂಲಭೂತ!
ಜೀವಧಾರಣನಾತ ಭವ್ಯಜೀವಿಯು ನೋಡೆ
ಫಲಿತ ಫಲದೊಳಗಿರುವ ಹುಳದ ರೂಪ.

ಘೋರ ಕಾನನದಲ್ಲಿ ಪ್ರಕೃತಿ ದೇವಿಯ ವಾಸ,
ಸೊಗಸಿನಾಗರ, ಹಸುರು ಬೀಡು ಕಾಡು
ಕಾನನದ ನಡುದಾರಿ ಸರ್ಪಗಳ ಆವಾಸ
ಸೊಗಸು ಬನ ಹೃದಯದಾ ರೀತಿ ಎಂತೊ!

ರಾಜ ಬೀದಿಯು ನೋಡೆ, ಭವ್ಯ ಮಂದಿರ ಸಾಲು
ನಾಗರಿಕರಾಂತಂತ ದಳಿತ ಜನವೊ!
ಆದರೊಂದು ನಡುವಲ್ಲಿ ವಿಟಜನರ ವ್ಯವಹಾರ
ಕಟುಕರಲ್ಲಲ್ಲಿ ನೋಡೆ-ಸುಖವಿದೆಂತೊ!

ಮುಗುಳುನಗೆ ಮುಖದಲ್ಲಿ ಒಯ್ಯಾರ ತನುವಿನಲಿ
ಅಟ್ಟಹಾಸದ ನಡೆಯು, ತೇಜ ಪೂಜ್ಯ-
ತನ್ನೊಂದು ಭಗ್ನತೆಯ ಆತನಲ್ಲದೆ ಯಾರು
ಅಳೆದು ನೋಡಲು ಸಾಧ್ಯ-ತಿಳಿಯೆ ನಿಜವ!

ಎಲ್ಲೆರೆಲ್ಲರ ನೆಚ್ಚಿ ತನ್ನ ತನ್ನವರೆಂದು
ನಿರಾಶೆ ಜಾಲದ ಜಾಡ್ಯದೊಳ ನುಗ್ಗಿ ಬಗ್ಗಿ;
ಭಗ್ನ ಹೃದಯದ ತಾಪ ಬೆಂದ ದೇಹದ ರೂಪ
ಯಾರೊಡನೆ ಪೇಳಲದೊ, ಕೇಳ್ವರಾರೊ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೧೩
Next post ಶಿವರಾಮರಾಯರು

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

cheap jordans|wholesale air max|wholesale jordans|wholesale jewelry|wholesale jerseys