ರಸಿಕ ಕವಿಗೆ….

ಶತಶತಮಾನಗಳಿಂದ
ನಿನಗ ‘ಅವಳು’
ಅರ್ಥವಾದದ್ದೆಷ್ಟು?
ಬರೀ ಇಷ್ಟೇ ಇಷ್ಟು!

ಸಾಕಪ್ಪ ಸಾಕು ನಿನ್ನೀ
ಕಾಗಕ್ಕ-ಗುಬ್ಬಕ್ಕನ ಕಥೆ
‘ಅವಳ’ ಅಂಗಾಂಗ ವರ್ಣಿಸುತ್ತಾ
ನಿನ್ನದೇ ಅತೃಪ್ತ ಕಾಮನೆ ತಣಿಸುತ್ತಾ
ಅಡ್ಡಹಾದಿಗೆಳೆವ ರಸಿಕತೆ!

ಆ ಸಂಸ್ಕೃತ ಕವಿಗಳ ಅಪರಾವತಾರ
ಹೇಳಿದ್ದೇ ಪರಾಕು
ಮತ್ತೆ ಮತ್ತೆ ಹೇಳುವ ಶೂರ!

ನೀ ಏನೇ ಹೇಳು
ಎರಡೆರಡಲಿ ನಾಲ್ಕು
ಆಗುತ್ತದೆಯೇ ಹದಿನಾಲ್ಕು?
ಹತ್ತಾರು ಗೋಡೆಗೆ ಒಂದೇ ಮಾಡು
ನೂರಾರು ಕಡ್ಡಿಗಳ ಹಿಡಿದಿಟ್ಟಿದೆ
ಪೊರಕೆಯೊಂದರ ನೂಲು
ಕಾಣುವ ಮುಖವೊಂದಕ್ಕೆ
ಕಾಣದ ಭಾವಗಳೆನಿತೋ
ಬಲ್ಲವರು ಯಾರು?

ತಿರುಳು ಬಿಟ್ಟು ಕರಟ ಹೆರೆವ
ನಿನ್ನ ಈ ಪರಿಗೆ ನಗಲೇ?
ಅಳಲೇ?
ಶತಶತಮಾನಗಳಿಂದ ನಿನಗೆ ‘ಅವಳು’
ಅರ್ಥವಾದದ್ದೆಷ್ಟು?
ಬರೀ ಇಷ್ಟೇ ಇಷ್ಟು!

ಒಮ್ಮೆ ಕಣ್ಮುಚ್ಚಿ ಮನವ ತೆರೆದಿಡು
‘ಖುಲ್ ಜ್ಹಾ ಸಿಮ್ ಸಿಮ್’ ಹಾಡು
ನಿಜಕ್ಕೂ ಧೈರ್ಯವಿದ್ದರೆ
ಆಳದಲ್ಲೇ ಹುದುಗಿ ಹೋದ
‘ಅವಳ’ ಭಾವಗಳ ಅರ್ಥೈಸಲು ನೋಡು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಮಾಜ
Next post ಅಸಹಾಯಕತೆ

ಸಣ್ಣ ಕತೆ

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

cheap jordans|wholesale air max|wholesale jordans|wholesale jewelry|wholesale jerseys