ಒಂದು ಸ್ವಪ್ನ

ಸ್ವಪ್ನರಾಜ್ಯದ ಭಾವದೋಜೆಯ
ನಡುವೆ ನಡೆದೆನು ತೆಪ್ಪಗೆ,
ಮನೋಭೂಮಿಯನುತ್ತು ಅಗಿಯಿತು
ತೇಜಪೂರಿತ ಘಟನೆಯು!
ಮೆತ್ತಗಾಸಿದ ತಲ್ಪತಳವೇ
ನನ್ನ ಯಾತ್ರೆಯ ಭೂಮಿಯು!!

ಮೇಲೆ ಭಾನುವು ಬಿಳಿಯ ಮುಗಿಲು
ಕೆಳಗೆ ಕೊರಕಲು ದಾರಿಯು;
ಹಾದು ನಡೆದೆನು ಏಳುಬೀಳುತ
ಏರಿದೆನು ಗಿರಿ ಮೇಲಕೆ!
ಬೆಟ್ಟತಪ್ಪಲು ಜಾರುಕಲ್ಗಳು
ಬೀಳುವೆನೊ ಎಂಬೆದರಿಕೆ!!

ಅಮರಲೋಕದ ಹೂವುತೋಟದ
ನೆನಪು ಸುಳಿಯಿತು ಮನದಲಿ
ಮಂದಮಾರುತ ಎತ್ತಿತಂದಾ
ಅಮರ ಗಾನವ ಕೇಳಿದೆ,
ಕೇಳಪೋದೆನು-ಶೂನ್ಯಲೋಕವು
ಗಾಳಿ, ಗಿರಿದುದಿ, ಮರಗಳೆ!

ಐಂದ್ರಜಾಲಿಕ ದೃಶ್ಯದಂತೆಯೆ
ಬೆಟ್ಟಗವಿಯಿಂ ಪಕ್ಕನೆ
ಇಂಪುಗಾನದ ದನಿಯ ಅಲೆಯೊಳು
ತನ್ನ ರೂಪನು ಸೇರಿಸಿ
ಬಂದಳೊರ್ವಳು ಇಂದುವದನೆಯು
ಇಂದು ರೂಪವ ಹಳಿಯಿಸಿ.

ಸುಳಿದಳೀಚೆಗೆ ಬೆಟ್ಟದುದಿಯಲಿ
ನಿಂತ ನಾನು ನನ್ನನು!
ಮರೆತು ನೋಡಿದೆ ವಿಶ್ವನಿರ್ಮಿತ
ಮಾಯೆ ರೂಪವ ನೆನೆದೆನೊ;
ರೂಪ ನೋಡುತ ನೀಲ ಬಾನಿನ
ಸ್ವಚ್ಚ ಶೀಲವ ಹಳಿದೆನೊ!

ಹೆರಳ ಕುರುಳು ಮುಡಿಯ ಮುಗುಳು
ಕಾಂತಿ ಬೀರುವ ಕಂಗಳು
ಬಾಲೆ ಸದ್ಗುಣೆ ಹಂಸಯಾನೆಯು
ಜಾಣೆ ನೋಟಕೆ-ಕೆನ್ನೆಯು
ಒಂಟಿಸರವನು ರತ್ನಮಾಲೆಯ
ಕಟ್ಟಿ ನೂಪುರ ರನ್ನೆಯು!

ನೋಡಿ ಹಿಗ್ಗಿದೆ ವನವು ಗಾಳಿಯು
ಹಿಗ್ಗಿತೆನ್ನೊಡೆ ಬೀಸುತ
ದೂರ ಸರಿದುವು ಸುತ್ತು ಸೇರಿದ
ಹಕ್ಕಿಮಿಗಗಳು ಭ್ರಮರವು;
ಒಬ್ಬನಾದೆನು ಮುಂದೆ ಸರಿದೆನು
ಪೋದ ಧೈರ್ಯವ ಕರೆದೆನು!

ಹೂವು ಎಲೆಗಳು ಎಲ್ಲಿ ಅಣಿಕಿಪು-
ವೆಂದು ನಾಚುಗೆಪಟ್ಟನೊ!
ಗಿರಿಯ ಮೇಲ್ಗಡೆ ಚೆನ್ನಕಾಣುವ
ಮುಗಿಲು ನಗುವುದೊ ಎಂದು ನಾ
ಭಾವಿಸುತ್ತಲಿ, ‘ಯಾರ ನೋಡುವಿ’
ಎಂದು ಕೇಳಿದೆನವಳನು.

‘ಯಾರ ಇಲ್ಲವು ಹಣ್ಣು ಹೂಗಳ-
ನಾಯ್ದು ಪೋಗಲು ಬಂದೆನೊ!
ಕಂಡು ಸೋತೆನು ಮನವು ಬಿಮ್ಮನೆ
ಎನ್ನ ನಿಲಿಸಿತು-ಇಲ್ಲಿಯೆ’
ಎಂದು ಹೇಳಲು, ‘ರಮಣಿ ಹೆದರದಿ
ರೆ’ಂದು ಪಕ್ಕದಲಿರಿತೆನೊ!

ಸರಸವಾಟದಲೊತ್ತು ಕಳೆಯುತ
ಮಾತುಮಾತಲಿ ಮುಳುಗುತ;
ನೋಟ ಬಿಂಬಾಧರವ ಹೊಕ್ಕಿತು,
ಕಣ್ಣು ಕಣ್ಣನು ನುಂಗಿತು!
ದೃಷ್ಠಿಹೊರಳಿತು-ತನುವು ಕೊಂಕಿತು;
ಕೈಯು ಎದೆಯಲಿ ನುಸುಳಿತು!!

ಮುದ್ದು ಮಾತಿನ ಮುದ್ರೆ ಕೆನ್ನೆಲಿ,
ಅಭಯ ಸೂಚನೆ ಬಾಯಲಿ-
ಜಾಣೆ ನಾಚುತಲಂಜಿ ಅಪ್ಪಿತು,
ಬಿಗಿದ ಅಪ್ಪಗೆ ಸುಖದಲಿ
ಇರಲು-ಪಾಪೀ ನಿದ್ದೆವಂಚನೆ
ಮಾಡಿ ಕೆಡಿಸಿತು ಸುಖವನು!!!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೧೫
Next post ಗಾಳಿ ಬೀಸುತ್ತಲೇ, ಬೀಸುತ್ತಲೇ ಇತ್ತು

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

cheap jordans|wholesale air max|wholesale jordans|wholesale jewelry|wholesale jerseys