ಬೆಳಕು ಬೇಕು

ಕಣ್ಣು ತೆರೆಸುವ ಬೆಳಕು
ನಮಗೀಗ ಬೇಕು

ಯಾರಿಗೆ ಬೇಕು ಷಂಡ
ಬೂದಿ ಮುಚ್ಚಿದ ಕೆಂಡ?
ಬೇಕೀಗ ಪ್ರಜ್ವಲಿಸುತ
ಬೆಳಗುವಾ ಜ್ವಾಲೆ

ಒಳಗೇ ಕುದ್ದರೇನು ಲಾವಾ?
ಜ್ವಾಲಾಮುಖಿ ಹೊರ ಉಕ್ಕಿ
ಸುರಿಯಬೇಕು
ಕೆಡುಕೆಲ್ಲವ ಸುಡಬೇಕು

ಉಕ್ಕುಕ್ಕಿ ಬರುವ
ಬಿಕ್ಕುಗಳ ಒಳತಳ್ಳಿ
ಆಂತರ್ಯ ಸುಟ್ಟರೇನು?
ಭೋರ್ಗರೆದು ಬರಲಿ
ಕಣ್ಣೀರ ಶರಧಿ
ಕೊಚ್ಚಿ ಹೋಗಲಿ ಕೊಳೆಯು
ಉಳಿದೀತು ಹಸನು!

ಉಸಿರು ತಾಗೀತೆಂದು
ಒಳಗೆಳೆದುಕೊಂಡು
ಬಚ್ಚಿಟ್ಟ ನಿಟ್ಟುಸಿರು
ಇನ್ನಾದರೂ ಹೊರಚಿಮ್ಮಬೇಕು
ಬಿರುಗಾಳಿಯಾಗಿ
ಹಗುರಾದುದೆಲ್ಲವೂ ತೂರಿಹೋಗಬೇಕು,
ಗಟ್ಟಿ ಉಳಿಯಬೇಕು!

ಮಣ್ಣೊಳಗೇ ಹೂತು
ನಿರ್ವೀರ್ಯವಾದೆಲ್ಲ ಕಾಳು
ತನ್ನೊಳಗಿನ ಜೊಳ್ಳೆಲ್ಲಾ ತೂರಿ
ಬಂಡೆ ಸೀಳುತ
ಮೊಳೆತು ಬರಬೇಕು
ಹಸಿರು ತರಬೇಕು!

ಮನದ ಆಳದಲ್ಲೆಲ್ಲೋ
ಅವಿತಿಟ್ಟ
ಅವ್ಯಕ್ತ ಭಾವಗಳು
ಎಲ್ಲ ಮುಸುಗುಗಳ
ಒದ್ದು
ಹೊರ ಹೊಮ್ಮಬೇಕು
ಸವಿ ಮಾತಾಗಬೇಕು!

ಬಚ್ಚಿಟ್ಟ ಬೆಳಕು
ಹೊರಹೊಮ್ಮಬೇಕು
ಕತ್ತಲಲಿ ಕಾದಿದ್ದು ಸಾಕು
ಇನ್ನು ಬೆಳಗಾಗಬೇಕು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರತ್ಯಕ್ಷ
Next post ಸೀರೆಯೊಳಗಡೆ ಕಷ್ಟವಿದೆ

ಸಣ್ಣ ಕತೆ

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

cheap jordans|wholesale air max|wholesale jordans|wholesale jewelry|wholesale jerseys