ಕವಿಯ ಮನಸ್ಸು

ಏಳುಲೋಕದಲೇಳು ಕಡಲಲಿ
ಏಳು ಪರ್ವತ ಬಾನಲಿ
ಏಳು ಸಾವಿರ ದೇಶದಿ,
ಸುತ್ತಿ ಹಾರ್ವುದು ನೋಡಿ ನೆಡೆವುದು
ನಿಮಿಷ ನಿಮಿಷಕೆ ಕ್ಷಣದಲಿ
ಕವಿಯ ಮನಸ್ಸದೊ ಹಾರ್ವುದು!

ಚಂದ್ರಲೋಕದ ಸುತ್ತು ತಿರುಗುತ
ಸೂರ್ಯಕಾಂತಿಯ ನೋಡಿತು!
ವಿಶ್ವಗೋಳವ ತಿರುಗಿಸಿ-
ಪಾತಾಳದಾಳಕೆ ಕೊರೆದು ನುಗ್ಗುತ
ಯಾವ ಜ್ಞಾನಿಯು ಹೇಳದ,
ವಿಶ್ವರೂಪವ ಹಾಡಿತು!

ಮೊರೆವ ತುಂಬಿಯ ತೆರದಲಿಂತಿದೊ
ಇಲ್ಲಿ ಅಲ್ಲಿ ಹಾರುತ
ಕವಿಯ ಮನಸನು ಬಾಯಲಿ,
ಗಗನದಾಡುವ ಲೋಕ ಗುಟ್ಟನು
ಕಂಡು ಹಿಡಿಯುತ ಹಾರುತ
ದೇವ ಸತ್ಯವ ಹೇಳುತ.

ಗಂಗೆ ಬಂದಾ, ಸ್ವರ್ಗ ಸೇರಿದ
ಕಾವೇರಿ ಕುಂಡಿಕೆ ಮಹಿಮೆಯ
ಯಮುನೆ ತೀರ್ಥ ಶಕ್ತಿಯ
ದೇವ ರಾಕ್ಷಸ ಸಮರ ಸರ್ವವು
ರಾಮ ರಾವಣ ರಾಜ್ಯದ
ಕೂಸು ಕೃಷ್ಣನ ಬೀರ್ಯವ

ಯಾವ ಜ್ಞಾನಿಯು ಕಂಡು ಕೇಳಿದೊ-
ಕವಿಯ ಮನಸ್ಸೊಂದಲ್ಲದೆ
ಅವನ ಲಿಖಿತವಲ್ಲದೆ,
ಕಾಳಿದಾಸನ ಕ್ಷೀರ ಸಾಮ್ಯದ
ಉಕ್ತಿ ಮರೆಯಲಿ ಎಂತು ನಾ?
ಸ್ತುತಿಸದಿರ್ಪುದು ಎಂತುವೊ?

ಸೂಜಿ ಮೊದಲಿಂ ವಿಶ್ವದಂತ್ಯಕು
ವಿಷಯ ಸರ್ವಽ ಹಾಡಿದರ್‍,
ಹಾಡದಿರುವುದು ಯಾವುದೊ?
ಕವಿಯ ಮನಸದು ವಿದ್ಯುತ್ ಶಕ್ತಿಯ
ಗತಿಯ ಮೀರಿದೆ-ದಾಟಿದೆ
ವಿಶ್ವಭೇಧಿಸಿ ಸಾಗಿದೆ.

ಕವಿಯೊ ತನ್ನ ಸೂಕ್ಷ್ಮವಾದದಿ
ಕ್ರಾಂತಿ ಸಾರಿದ ರಾಜ್ಯಕೆ
ಶಾಂತಿ ನೀಡಿದ ದೇಶಕೆ;
ಜಗದ ಎಲ್ಲಾ ಅಲ್ಲಸಲ್ಲದ
ವ್ಯಾಜ್ಯ ಸಮರಕೆ ಮೂಲವೊ
ಕವಿಯ ನಿರ್ಭಯ ಮನಸ್ಸದೊ!

ಮಧುವ ಜಿಹ್ವೆಯಲಿಟ್ಟ ತೆರದಲಿ
ದೇವ ಕವಿಗಳ ಹಾಡದು,
ಗಾನರಸದಲಿ ತೇಲಿಸಿ,
ಜ್ಞಾನ ಶಕ್ತಿಯ ವಿಶ್ವ ಗುಟ್ಟನು
ಎರಡು ಕೈಯಿಂ ತಟ್ಟುತ
ಪೇಳ್ವ ಹಾಡದೊ, ಆಹಹಾ!

ಮಂತ್ರ ಋಷಿಗಳ ಪ್ಲೇಟೊ ಬರೆಹವು
ಮಿಲ್ಟನ್ ಸಾರಿದ ಮಾಕತೆ,
ವೇದ ಮಂತ್ರವು ಕವಿಮತ;
ವಾಲ್ಮೀಕಿ ಹೋಮರ್‍ ಗಯಟೆ ವ್ಯಾಸನು
ಷೇಕ್ಸ್‌ಪೀಯರ್‍ ಡಾಂಟೆಯೊ
ದೇವ ಕವಿಗಳೊ ಲೋಕದಿ.

ಸೂರೆಮಾಡಿತು ಲೋಕ ಮನಸನು
ಕವಿಯ ಮಂತ್ರದ ಕ್ರಾಂತಿಯೊ
ರಂಗು ರಂಗದೊ ಚಿತ್ತಾರ-
ಕ್ಷೀರ ಶರ್ಕರಾ ಬೆರೆಸಿ ಸವಿಯುವ
ತೆರದೆ ವಾಣಿಯು-ಅಮೃತ
ಬಂದ ಮನಸ್ಸು-ಸರಸ್ವತಿ!

ಅನ್ನ ನೀರೂ ಬಿಟ್ಟು ಬಾಳ್ವೆನೊ
ಹಾಡಾನಂದವ ಪಡೆಯುವ
ಭಾಗ್ಯ ಎಂತು ನಾನ ಬಿಡುವೆನೊ?
ಬಾಳಲೀ ಕವಿ ಮಾಽತ್ಮರೆಲ್ಲ
ಚಿರಾಯುವಿಂದಲಿ ಲೋಕದಿ!
ಅಗ್ನಿಯಂತೆಯೆ ಸತ್ಯದಿ!!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೨೦
Next post ನಿನ್ನ ಹೆಸರು

ಸಣ್ಣ ಕತೆ

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

cheap jordans|wholesale air max|wholesale jordans|wholesale jewelry|wholesale jerseys