ಅಭಿಸಾರಿಕೆ

ಹೊರಟೆ ಎಲ್ಲಿಗೆ ಅಭಿಸಾರಿಕೆ
ನಿರ್ಧಯಳೇ ಕಂದನ ಕರೆಗೆ
ಬಿಂಕ ಬಿನ್ನಾಣವ ಉಟ್ಟು
ಮುತ್ತು ರತ್ನವ ತೊಟ್ಟು
ಹೊರಟೆ ಎಲ್ಲಗೆ ನೀ ಎಲ್ಲಿಗೆ?
ಈ ಸೌಂದರ್ಯದ ಪ್ರಖರತೆ
ಆಗಬಾರದೆ ಅತ್ಮದ್ದು

ಹಿಂದೊಮ್ಮೆ ಹೊರಟಿದ್ದಳು ಅಕ್ಕ
ದೂರಾಗಿಸಲು ಮನದೊಳಗಿನ ದುಃಖ
ಭವಬಂಧನವ ತೊರೆದು
ಚೆನ್ನನ ಬೆನ್ನು ಹಿಡಿದು,
ಅಂದು ಆತ್ಮಸಾಕ್ಷಾತ್ಕಾರವಾದರೆ
ಇಂದು?

ನೀ ಎನ ತೊರೆದು ಹೊರಟಿರುವೆ
ನಿನಗ್ಯಾವ ಚೆನ್ನ ಕಾದಿಹನು
ಇನ್ನೊಬ್ಬ ಅಕ್ಕ ನೀನಾಗದಿದ್ದರೂ
ಆಗಬೇಡ ನೀ ಅಭಿಸಾರಿಕೆ
ಬೇಡ ಬೇಡ ಸಖಿ
ನಿನ್ನಧಃಪತನದ ಗತಿ
ಕೊಟ್ಟದ್ದಲ್ಲ ವಿಧಿ
ನೀನೇ ಅಗ್ನಿಯನ್ನಪ್ಪಿದರೂ
ಅಗ್ನಿಯೇ ನಿನ್ನನಪ್ಪಿದರೂ
ಸುಡುವುದು ನಿನ್ನೊಡಲು ಮಾತ್ರ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಳಗಿನವನು
Next post ದ್ವಾರಕೆ ಮುಳುಗಿದಾಗ

ಸಣ್ಣ ಕತೆ

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

cheap jordans|wholesale air max|wholesale jordans|wholesale jewelry|wholesale jerseys