ವಿರಹಿಣಿಯ ಸಂತಾಪ

ಚಂದ್ರಮುಖಿಯು ನೀನು ಎಂದು ಬೆಡಗುಗಾರ್ತಿ ಚೆಲುವೆಯೆಂದು
ಸಂದ ಜೀವದಾತ್ಮ ಗೊಂಬೆಯೆಂದು ಪೇಽಳಿ-
ಇಂದು ತರವೆ ಇನಿಯ ಇನಿತು ಕೊರಗಿಸುವುದೊ!

ನೀರೆ ನೀನೆ ಶೂರೆ ಎಂದು ಎನ್ನ ಮೋಹ ಕಲಶವೆಂದು
ಸಾರೆ ಸರಸಿ ತೀರದಲ್ಲಿ ಚೆನ್ನು ಮುತ್ತು-
ಮೀರಿದೊಂದಾನಂದದಿತ್ತು-ಎಲ್ಲಿ ಪೋಽದೆ?

ಊರದೇವರಬ್ಬದಲ್ಲಿ ಬೆಳ್ದಿಂಗಳಾ ಆಟದಲ್ಲಿ
ಸೇರಿದವರು ಈ ದಂಪತಿಗಳಾರು-ಎಂದು,
ಸಾರಿನೋಡೆ ನಾಚಿ ನಡೆದುದನ್ನು ನೆನೆಯೆಯಾ?

ಅಂದು ಪತ್ರದಲ್ಲಿ ನೀನು ಬಣ್ಣನೆಗಳ ಶಬ್ದ ಜಾಲ-
ದಿಂದ ಕರೆದು ಬರುವ ಸುಖದ ಕನಸ ಕಂಡು
ನೊಂದ ನನ್ನ ವಂಚಿಸುವುದು-ನಿನಗೆ ತರಽವೆ?

ಬಡವರೊಲಿದ ನಲ್ಮೆ ಜೀವ ನೈಜ ಸುಖದ ರೂಪು ಅಲ್ಲ-?
ಬಡಿದು ಬಾಳ ಭಾಗ್ಯವನ್ನು ದ್ರೋಹದಿಂದ-
ಪಡೆವ ಅಲ್ಪ ಹುಸಿಯ ಸುಖದ ಕೆಚ್ಚು ಏಽಕೆ?

ಮೂಡುವೆಟ್ಟ ಹತ್ತುವಾಗ ಸೋಗೆ ಕೇಕೆ ಹಾಕುವಾಗ
ಕಾಡಸೊಬಗು ನೋಡಿ ದಣಿದು ಸೇರಿದಾಗ
ಕೂಡಿ ಬಿಡಿಸಿ ಲೋಕ ಸುಖವ ಪೇಳಿದೆಽಲ್ಲಿ?

ಮೊಸರು ಕಡೆದು ಬೆಣ್ಣೆ ತೂಗೆ, ಕಂದ ಜೋ ಜೊ ಲಾಲಿ ಹಾಡೆ
ಹಸಲೆ ಹುಲ್ಲ ಕುಯ್ಯುವಾಗ್ಗೆ ಹಾಡಿದೇನೊ?-
ಹೊಸತು ಜೋಡಿ ಜೀವ ಸುಖದ ಮರೆತೆಯೇನೊ?

ಕೊಲ್ಲಿಗದ್ದೆ ಅರುವಿಗಾಗಿ, ಹೊನಲು ಹರಿವ ಬಯಲಿಗಾಗಿ
ಬಳ್ಳಿ ಮನೆಯ ಕಟ್ಟಿ ನಲಿವ-ಕಾಡು ಸುಽತ್ತಿ
ಮಲ್ಲಳಿಗಳ ಹಾಡ ಕೇಳೆ ನಡೆವ ಬಾಽರೊ!

ಸೂಜಿದಾರ ಹೊತ್ತು ಹೊತ್ತು ಹೊರುವ ಭಾರ ಅದೇ ಆಯ್ತು!
ಜಾಜಿ ಕೋದು ಯಾರ ಕೊರಳಲಿರಿಸಲೆಂದು
ಸೋಜಿಗದಲಿ ನೆನೆದು ನೆನೆದು-ಸೊರಗಿದೆ ನಾ!

ಬಾವಿ ನೀರ ಸೇದುವಾಗ ಎಸರ ಬೇಯ್ಸಿ ತೆಗೆಯುವಾಗ
ಕವಿದ ಮಂಕ ಕಣ್ಣಿನಿಂದ ಒರಸುವಾಗಽ
ಜೀವಿಗಳ ಈ ಹುಸಿಯ ಬಾಳ ನೆನೆವೆ ನಾಽನೊ!

ನಗುತಲಿರು ನೀ, ನಗುವಿನಲ್ಲಿ ಬಾಳ ಸತ್ಯ ಮೂಡಿ ಬರಲಿ-
ಒಗುವ ಸತ್ಯ ನಲುಮೆಯೆಲ್ಲ-ಒಲುಮೆಯಲ್ಲಿ,
ಸೊಗವನೀಕ್ಷಿಸುತಲೆ ಬರಲಿ-ಆಹಾ ಕಾಽಯೋ!

ಸೂರ್ಯ ಕಾಂತಿ ಬೀಳ್ವ ಮುನ್ನ, ಚಂದ್ರ ಬೆಳಕು ತೋರ್ವ ಮುನ್ನ,
ಕಾರ್ಯಲೋಕ ಶಾಂತಿ ತಲ್ಪ ಸೇರ್ವ ಮುಽನ್ನ,
ಭಾರ್ಯೆ ದುಃಖವಳಿಸೆ, ಪ್ರಿಯಾ-ಬಂದು ಸೇಽರೊ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೨೧
Next post ಈ ಶಿಕ್ಷೆ ಯಾರಿಗೆಂದು?

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

cheap jordans|wholesale air max|wholesale jordans|wholesale jewelry|wholesale jerseys