ಪಂಚತಂತ್ರದ ಕುದುರೆ

ಕಣ್ಣಿನ ದರ್ಜಿಯೊಳಗೆ
ಚಂದ್ರ-ಚುಕ್ಕಿ, ಆಕಾಶ-ಮೋಡ, ಹಗಲು-ರಾತ್ರಿ
ಕಾಮನ ಬಿಲ್ಲುಗಳನೆಲ್ಲ ಹಿಡಿದು
ಸೂರ್ಯ ಕಿರಣಗಳ ಬಣ್ಣ ಬಣ್ಣದೆಳೆಗಳಿಂದ
ದಾವನಿ ಹೊಲೆದು ಮುಗಿಸಿ
ಹುಬ್ಬಿನ ಚೌಕಟ್ಟಿಗೆ ಹೊಂದಿಸಿ
ಮನದೊಳಗೆ ತೂಗು ಹಾಕಿ-ಸಂತೋಷಿಸುತ್ತಿದ್ದಂತೆ
ಗಾಢವಾದ ನಿದ್ರೆ. ಅದನ್ನೇ ಹೊದ್ದು ಸೀಟಿಗೊರಗಿದ್ದು-
ಪಂಚತಂತ್ರದ ಕುದುರೆಯ ಕೆನೆತ
ಏಳು ಸಮುದ್ರದಾಟಿ ಏಳು ಗುಡ್ಡದಾಟಿ
ಅಲ್ಲೊಂದು ಅರಮನೆ, ಅಲ್ಲೊಬ್ಬ ರಾಜಕುಮಾರ
ಅವನ ನಾಗಾಲೋಟದ ಕುದುರೆ,
ರೆಕ್ಕೆಗಳು ಮೂಡಿ ಕುರುರೆ ಏರಿದ್ದೇನು
ಯಕ್ಷಿನಿಯರ ಮುಗುಳ್ನಗೆ ನಾಚಿಸಿದ್ದೇನು
ಮೋಡ ಸಮುದ್ರಗಳನೀಜಿ
ಮೋಡ ಗುಡ್ಡಗಳನೇರಿ
ಬಣ್ಣದ ದಾವನಿ ಹಾರಾಡಿಸುತ
ಮೇರಿ ಲಾಲ್ ದುಪಟ್ಟಾ ಮಲ್‌ಮಲ್ ಹಾಡುತ್ತಿದ್ದಂತೆ
ರಾಜಕುಮಾರನ ಮನೆ ಅಂಗಳಕ್ಕಿಳಿದದ್ದು-
ಸೂರ್ಯ ನಕ್ಕ, ಪಡುವಣ ಮುಖ
ಕೆಂಪೇರಿತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೂರು ಲಂಗಗಳ ಮಾತುಕತೆ
Next post ವೃತ್ತ

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys