ಕೇರಳ

ಹದಿನಾರಕೆ
ಈಗತಾನೆ ಐನೀರು ಮುಳುಗಿ ಬಂದವಳು
ಗಾಳಿಗೆ ತಲೆಮುಡಿ ಹರಡಿ ಒಣಗಿಸುತಿದಾಳೆ
ಶಕುಂತಳೆ
ಇದು ವಿಶ್ವಾಮಿತ್ರ ಸೃಷ್ಟಿ
ಅಪರಿಮಿತ ಯುಗದ ಬ್ರಹ್ಮಚರ್ಯದ ಫಲ.
ಈ ಪ್ರಮೀಳೆ ಯಾರಾರ ಹೃದಯಕ್ಕೆ
ಹಚ್ಚುವಳೊ ಬೆಂಕಿ!
ಆರಿಸುವ
ಲಾಲಿಸುವ ತೋಳ ತೆರೆಮಾಲೆ
ಕುಡಿಮೊಲೆಯ ಕ್ಷೀರ ನಿಕ್ಷೇಪ
ಹೊತ್ತು ತಲೆಬಾಗಿಸಿದ ಕಲ್ಪವೃಕ್ಷ

ಛೀ ಸಾಕು
ಈ ಹುಚ್ಚು
ಇದು ಸೆಕೆಂಡ್ ಹ್ಯಾಂಡ್ ಕಾವ್ಯ
ಯಾರ ಟೇಸ್ಟಿಗೋ ಮಾಡಿದ ಅಡಿಗೆ ಇದು
ಪಂಪ, ಕುಮಾರವ್ಯಾಸ, ಮಿಲ್ಟನರ
ಕಿಸೆಗೆ ಕೈಹಾಕಿ
ಪದ ವಿಜೃಂಭಣೆಯ ಅಮಲಿನಲ್ಲಿ
ನಾನು ರಾಮಾಯಣ ಬರೆಯಲೊಲ್ಲೆ
ನನ್ನ ದರ್ಶನ ಬೇರೆ
ಕೊಂಡೆ ಕೊಳ್ಳಗಳಲ್ಲಿ ಗಲ್ಲಿಗಳಲ್ಲಿ
ಕಂಡ, ಅರಗಿಸಿಕೊಂಡ,
ಮರೆತೇ ಹೋದ ಸಂಕೀರ್ಣ
ಅನುಭವದ ವಿಸ್ಕಿ, ಅದು
ಇಲ್ಲಿ ವಿಶ್ವಾಮಿತ್ರನೂ
ನಾಯಿಯ ಮಾಂಸ ತಿಂದು ತೇಗಿದ್ದ
ಇದಕ್ಕೆ ನೂರೆಂಟು ಪ್ರಾಕಾರಗಳು
ಈಕೆಗೆ ಹದಿನಾರೆಂಬ ಛಲವೇಕೆ?
ಕಾಲದ ಪರೆ ತೆರೆದರೆ
ಒಳಗೆ ಮಸಿ ಹಿಡಿದ ಪೆಟ್ಟಿಕ್ಕೋಟು
ಅಗ್ಗ ಪೌಡರಿನಲ್ಲಿ ಬೆವರಿನ ಕಮಟು
ಹೆಲೆನಳ ಚರ್ಮದಲ್ಲೂ ಗ್ರೀಸಿನ ಜಾರು
ಈ ವಿಕೃತ ಮುಖಗಳ ವ್ಯಕ್ತಿ
ಇರಬಹುದು ನಾನು ನೀನು

ನನ್ನ ಹಾಡೇ ಬೇರೆ
ತಾಳಲಯ ವ್ಯಾಕರಣ ಸಿಂಟ್ಯಾಕ್ಸು ಎಲ್ಲ
ಒಡೆದು
ನೋವು ನಗೆ ಜಿಗುಪ್ಸೆ ವ್ಯಂಗ್ಯ
ತಿಳಿದ ತಿಳಿಯದ ಸುಪ್ತ ಜಾಗೃತ ಭಾವಗಳ
ಅಕ್ರೊಬಾಟಿಕ್ಸ್
ಏನೋ ಹೇಳಬೇಕು
ಏನೆಂಬುದು ಮಬ್ಬಿ
ಹೇಗೋ ಹೇಳಬೇಕು
ಹೇಗೆಂಬುದು ಅಸ್ಪಷ್ಟ
ಅತೃಪ್ತಿಯ ಉಗ್ಗು
ಕಳಚಿ ಬೀಳುವ ಇಂದ್ರಿಯ ಪ್ರಜ್ಞೆಗಳಿಗೆ ಜೋತು
ನನ್ನ ಪ್ಯಾಟರ್ನ್ ಕಂಡು ಹುಡುಕುವ
ಪ್ರಯತ್ನ ಇದು
ಈ ಸಂಕೀರ್ಣತೆಯ ಅಕ್ಷಯ ಜಿಡ್ಡುದಾರ ಮೈಬಿಗಿದು
ಅನುಭವವಾಗಿ, ಅದು ನಾನಾಗಿ
ನಾನೆ ಅಭಿವ್ಯಕ್ತಿಯಾದಾಗ
ಅದೇನು ನಾನೇ ನನ್ನ ಕಾವ್ಯ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇವ ಅವನಲ್ಲ
Next post ಬಯಕೆ

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

cheap jordans|wholesale air max|wholesale jordans|wholesale jewelry|wholesale jerseys