ಅಸ್ಪೃಶ್ಯರು

ನಾಯಿಗಳಿದ್ದಾವೆ! ಎಚ್ಚರಿಕೆ! ಎಂದು
ಯಾಕೆ ಬೆದರಿಸುತ್ತೀರಿ, ಫಲಕದ ಹಿಂದೆ ನಿಂದು?
ನಾವು ಬರೇ ಈ ಬೀದಿಯಲ್ಲಷ್ಟೆ ಹೋಗುತ್ತೇವೆ
ಮೌನ ಅಸಹ್ಯವಾದಾಗ ಮಾತಾಡುತ್ತೇವೆ
ಅಳದಿರುವುದಕ್ಕಾಗಿ ಒಮ್ಮೊಮ್ಮೆ ನಗುತ್ತೇವೆ

ನಾಯಿಗಳನ್ನು ಛೂ ಬಿಟ್ಟು ಬೆದರಿಸುತ್ತೀರಿ ನೀವು
ನಾಯಿಗಳಿದ್ದಾವೆ ಸ್ವಾಮಿ ಗೊತ್ತು ನಮಗೆ
ನಿಮ್ಮ ನಾಯಿಗಳಿದ್ದಾವೆ ಕಾರುಗಳಿದ್ದಾವೆ
ಪೋಷ್ ಹೊಟೇಲುಗಳಿವೆ ಕ್ಯಾಬರೆಸ್ವರ್ಗದ ದೇವರು ನೀವು
ಈಚೆಗೆ ಬೀದಿಗಳಲ್ಲಿ ನಾವೂ ಇದ್ದೇವೆ ಅಸ್ಪೃಶ್ಯ ವರ್ಗದ ಜನರು

ಅಪರಿಚಿತರಂತೆ ನೋಡುವುದೇಕೆ, ಸ್ವಾಮಿ?
ನಮಗೆ ಬಹು ಹಳೆಕಾಲದ ಪರಿಚಯವುಂಟು ಮರೆತಿರ?
ಹಿಂದೆ ಬ್ಯಾಬಿಲೋನಿನಲ್ಲಿ ನಿಮ್ಮ ಗಾಣ
ಎಳೆದವರು ನಾವು
ಮಾರುಕಟ್ಟೆಗಳಲ್ಲಿ ನಮ್ಮನ್ನು ಹರಾಜಿಗೆ
ಮಾರಿದವರು ನೀವು
ನಿಮ್ಮ ಊಳಿಗದ ಗೂನು ಈ ಬೆನ್ನ ಮೇಲುಂಟು
ನಮ್ಮ ಮಕ್ಕಳಿಗೂ ಇದರ ಹೆದರಿಕೆಯುಂಟು

ಸಂಧಾನಗಕ್ಕಾಗಿ ನೀವು ಬಂದದ್ದೇನೋ ಖರೆ
ಆದರೆ ಹೇಗೆ ಮಾತಾಡಿದರೂ
ನಮ್ಮ ಭಾಷೆ ನಿಮಗೆ ಅರ್ಥವಾಗುವುದಿಲ್ಲ
ಹಾಗೆಂದು ನಿಮ್ಮ ಅಂಬೋಣ
ಎನು ಮಾಡೋಣ, ಹೇಳಿ
ನೀವು ಪ್ರಯತ್ನಿಸದೇನೆ, ನಿಮಗಿಷ್ಟವಿಲ್ಲದೇನೆ
ಅರ್ಥವಾದೀತು ಎಂದಾದರೂ ಒಮ್ಮೆ

ಇಷ್ಟಕ್ಕೆಲ್ಲಾ ಯಾಕೆ ಹೀಗೆ ಹಿಸ್ಟೀರಿಯಾ ಬಡಿದವರಂತೆ ಕೂಗುತ್ತೀರಿ?
ಸಾಹಿತ್ಯ ಸಂಸ್ಕಾರ ಸಂಪತ್ತು ಅಧಿಕಾರ ಎಲ್ಲವೂ ನಿಮ್ಮದೇ ಸ್ವತ್ತು
ಎಂದ ಮೇಲೆ ಯಾಕೆ ಹೀಗೆ ಕೂಗಾಡುತ್ತೀರಿ?
ಕ್ರಾಂತಿಗಳು ಬಂದಿವೆ ನಿಜ
ಬಂದು ಹೊರಟುಹೋಗಿವೆ
ಅವು ಹೊರಟುಹೋದ್ದರಿಂದಲೇ ನಿಮ್ಮ ಪೀಳಿಗೆ ಬೆಳೆದಿದೆ
ಬೆಳೆಯುತ್ತಲೇ ಇದೆ
ಎಂದ ಮೇಲೆ ಸುಮ್ಮನೆ ಯಾಕೆ ಹೀಗೆ ಒದ್ದಾಡುತ್ತೀರಿ?

ಯಾಕೆಂದರೆ, ಚರಿತ್ರೆ ಆವರ್ತಿಸುವುದಿಲ್ಲ
ವರ್ತಮಾನ ಹೀಗೇ ನಿಂತಿರುವುದಿಲ್ಲ
ಏನೋ ಸಂಭವಿಸಲಿದೆ-ಎಂದೆ?
ಇದು ನಮಗೆ ಗೊತ್ತು
ನಮಗೆ ಗೊತ್ತೆಂದು ತಿಳಿದದ್ದರಿಂದಲೆ
ನಮ್ಮ ಕಂಡಾಗ ನಿಮ್ಮ ಮುಖಕ್ಕೊಂದು ಅಪೂರ್ವ
ಪ್ರೇತಕಳೆ ಬರುತ್ತದೆ: ಇದು ಸಹಜ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹವಳ ದ್ವೀಪ
Next post ಅಧೋಗತಿಗೆ ಕನ್ನಡ

ಸಣ್ಣ ಕತೆ

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

cheap jordans|wholesale air max|wholesale jordans|wholesale jewelry|wholesale jerseys