ಹೊಸ ದೇವರ ಬರವಿಗಾಗಿ

ಓ ಓಸಿರಿಸ್! ನೈಲ್ ನದಿಯೇಕೆ ಉಕ್ಕಲಿಲ್ಲ?
ನಿನ್ನ ಕೊಳೆಯುತ್ತಿರುವ ಮೈಯಿಂದ ಸಸ್ಯಗಳೇಕೆ ಹುಟ್ಟಲಿಲ್ಲ?
ನಿನ್ನೆಲುಬುಗಳ ಹುಡುಕಿ ತಂದು ರಾಸಿ ಹಾಕಿ ಕರೆದರೂ ಕಾದರೂ
ಸತ್ತ ನೀ ಮರಳಿ ಬರಲಿಲ್ಲ!

ಆಶ್ವಯುಜ ಶುದ್ಧ ಮಾರ್ನಮಿ ಬರಲೆಂದು
ಬಾಲಕರು ಬಂದು ಹರಸಿದರೂ
ಮಾಡಿಟ್ಟ ನೈವೇದ್ಯ ಹಳಸಿದರೂ
ಕೂಗಿದರೂ ಓಗೊಲಿಲ್ಲ
ಪಾತಾಳದಿಂದ ಬಲೀಂದ್ರ ಬರಲಿಲ್ಲ ಮತ್ತಿಲ್ಲಿಗೆ

ಸತ್ತರೆ ಅಜೀರ್ಣದಿಂದ ಇಂದ್ರಾಗ್ನಿ ವರುಣರು ಮತ್ತೆ ಹುಟ್ಟಲಿಲ್ಲ
ಈ ಬ್ರಹ್ಮವಿಷ್ಣುರುದ್ರರೂ ವಯೋವೃದ್ಧರಾಗಿ ಮನುಷ್ಯ
ಜನಾಂಗ ಸ್ವರ್ಗ‍ದ ಸಂಪರ್ಕ ಕಳೆದಾಗ
ಸ್ವಂತ ಭೂಖಂಡವೂ ಕತ್ತಲೆಯ ಅಭೇದ್ಯ ಖಂಡ
ಅರ್ಥ ಚ್ಯುತಿಗೊಂಡ ಭಾಷೆ ಬರೇ ಗೊಂದಲಗೇರಿ ಸದ್ದುಗದ್ದಲದ
ಸುತ್ತು ಮುಖಗಳ ಮೇಲೆ ಕಿತ್ತರೂ ಬಾರದಂಥ ಅಂಟುಮೌನ
ಅಂತರ್ಮುಖದೊಳಗೆ ಕೂಡ ಅಪರಿಚಿತತ್ವ ಮುಖಾಮುಖಿಯ
ಈ ಹೆಪ್ಪುಗತ್ತಲೆಯಲ್ಲಿ ಹುಡುಕಿದರೆ

ಕ್ಯೂಬ ಬೊಲೀವಿಯಾ ಶೇಗವೇರಾ ಸಹ ದಾಟಿ
ಮತ್ತೆ ಹಿಪ್ಪಿ ಅತಿಮಾನಸಗಳನ್ನೂ ಅತಿಕ್ರಮಿಸಿ
ಅಂತ್ಯಗಳನ್ನೂ ಸೀಮೆಗಳನ್ನೂ ತಿರಸ್ಕರಿಸಿ
ಬೆಳೆದರೆ ಜೀವವಿಕಾಸವಲ್ಲ ಸಾಕ್ಷಾತ್ ಸ್ವಯಂಭೂ
ಸ್ವಂತ ಸನ್ನಿವೇಶಗಳ ತುರ್ತು ಆಶಯಗಳೇ ಮೈತಳೆದು
ನಮ್ಮ ನಾಭಿಕುಹರಗಳಿಂದ ತೊಡೆಗಳಿಂದ ನರಗಳಿಂದ
ಮೈ ಮನಸ್ಸಿನ ಭಾಗವಾಗಿ ನಮ್ಮೆಲ್ಲರ ಸಮಗ್ರ
ಸಂಕೇತವಾಗಿ ಏಳುತ್ತಾರೆ ಎದ್ದು ಸ್ವರ್ಣಗೋಪುರ ಸ್ಥಾಪನೆಗಳ
ಕೆಡವಿ-ಕೆಡವಿದರೆ ಉಸಿರಾಟ-ಉಸಿರಾಡಿದರೆ
ನಮ್ಮ ಬಿಡುಗಡೆ ಬಿಡುಗಡೆಯಲ್ಲಿ ಹೊಸ ಹುಟ್ಟು ಬೆಳವಣಿಗೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೂರ
Next post ಸ್ವರ್ಣ ಕಾಲ

ಸಣ್ಣ ಕತೆ

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

cheap jordans|wholesale air max|wholesale jordans|wholesale jewelry|wholesale jerseys