ಕವಿಯ ಬಯಕೆ

ಕವಿಯಾಗಿ ಸಲ್ಲಿಸುವ ಮಧುರಗಾನದ ಸೊಂಪು
ನುಣ್ದನಿಗಳಿಂಪಿನಿಂ ಬರೆದು ಪೊಗಳುವ ಮಾತು
ಸಾಲುಗಳ ಲೀಲೆಯಲಿ ಬರೆದ ಬಡಗಬ್ಬಿಗನ
ನಾಲ್ಪಂಕ್ತಿ ಕವನವದು ಏನು ಕಲ್ಪಿತ ವಾಣಿ!
ವೇದಗಳು ಶಾಸ್ತ್ರಗಳು ಕವಿಜಿಹ್ವೆ ಉಕ್ತಿಗಳು
ಯಾರ ಹಂಗನು ಕಾಯೆ ಹೇಳಿ ನಲಿವುವೊ ಏನೊ!
ತಮ್ಮ ಹೃದಯದ ಬಯಕೆ ಪದ್ಯ ಸಾಲ್ಗಳ ಮಾಲೆ.
ಕವಿಯು ಮರೆ ಮೋಸವನು ಎತ್ತಿ ತೋರುವ ಇಹದ
ಬಿಚ್ಚು ಮನಸಿನ ಬೇಹುಗಾರನೆಂದರೆ ಏನು?

ಅವನ ಬಯಕೆ ಅದೇನು?  ಜೀವನದ ಸಮರವನು
ಸಾಮರಸ ವಾದದಲಿ ಹಾಡಿತೋರಿಸಿ ನಲಿದು
ಜನದ ಪಾಡಿಗೆ ತಾನು ಪಾಲುಗಾರನು ಆಗಿ
ಕಳ್ಳ ಜೀವದ ತಂತ್ರಗಳ ಬಯಲಿಗೆಳೆ ತಂದು
ಜ್ಞಾನಿಗಳ ನಿಷ್ಪಕ್ಷ ತಲೆಗಳನು ತೂಗಿಸುತ
ತಾನು ಹಾಡಿದ ಗಾನ ಯಾರು ಪೊಗಳುವರೆಂದು
ತನ್ನ ವಾದಕೆ ಯಾರು ಮನ್ನಣೆಯ ಸಲಿಸುವರು
ಎಂದು ನೋಡುವ ತಾನು ಬರೆದ ಹಾಡ್ಗಳನೆಲ್ಲ
ಕ್ರಮವಾಂತು ಹೇಳಯವುದೆ ಅವನ ಜೀವದ ಬಯಕೆ!

ಮಧುರವಾದಾ ಕೀರ್ತಿ ಕವಿವರನೆ ಬಯಸುವನು
ತಾನು ಲೋಕಕೆ ಅಂದ ವಿಶ್ವರಹಸ್ಯದ ಸೊಲ್ಲು
ಪಾಪಿಯಾದವನೊಬ್ಬ ಹೇಳಿ ನಲಿದೊಡೆ ಕವಿಯು
ಹಿಗ್ಗುವನು, ಎಲ್ಲರಂತೆಯೆ ಪೇಳಲಿಚ್ಚಿಪನು!
ಆದಿ ಕವಿಯನು ಮೀರ್ವ ಬಯಕೆ ಅವನಲ್ಲಿಲ್ಲ!
ತನ್ನ ಒಣ ಮಾತುಗಳು ಮನ್ನಣೆಯ ದೃಷ್ಟಿಯಲಿ
ಹೊರಳಿದರೆ, ತನ್ನ ಸೇವೆಯು ರಸಿಕ ವೃಂದವದು
ಗಣಿಸಿದರೆ, ತನ್ನ ಬಿರುನುಡಿ ಜನಕೆ ನೀತಿಯನು
ಕಲಿಸಿದರೆ, ಅದೆ ಜಗದ ಕವಿ ಪ್ರಯತ್ನದ ಫಲವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೩೧
Next post ನನ್ನ ಸಾಮರ್ಥ್ಯ

ಸಣ್ಣ ಕತೆ

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

cheap jordans|wholesale air max|wholesale jordans|wholesale jewelry|wholesale jerseys