ಹಚ್ಚೋಣ ಲಕ್ಷದೀಪ

ಕರಿಮೋಡ ಕರಗಿ
ಹರಿದು ಹರುಷದ ಧಾರೆ
ಭೂದೇವಿ ಮೈತುಂಬಿ ಬರಲಿ.
ಬಾಳ ದೀಪಗಳು ಬೆಳಗುತ್ತಾ ಇರಲಿ
ಮನ-ಮನೆಗಳು ನಗುತಲಿರಲಿ.

ಜಾತಿ ವಿಜಾತಿಯ ತೊರೆದು
ಭಾತೃತ್ವವ ಮೆರೆದು
ಒಂದಾಗಿ ದೀಪ ಹಚ್ಚೋಣ.
ಭಾರತಾಂಬೆಯೆ ನಮ್ಮ
ಜನ್ಮ ನೀಡಿದ ತಾಯಿ
ಒಂದಾಗಿ ರಕ್ಷೆ ನೀಡೋಣ.

ಹರಿವುದೊಂದೇ ರಕ್ತ
ಕುಡಿಯುದೊಂದೇ ನೀರು
ಮತ್ತೇಕೆ ಹಗೆತನದ ತಂತ್ರ.
ಒಂದೆ ಅಮ್ಮನ ಹಾಲು
ಕುಡಿದಂಥ ನಾವು
ಹಾಡೋಣ ಐಕ್ಯಮಂತ್ರ.

ಸಾಮರಸ್ಯದ ಬದುಕು
ಇದೆ ನಮ್ಮ ಕನಸು.
ನಂದಿ ಹೋಗಲಿ ತಾಪ.
ನೋವಿರಲಿ ನಲಿವಿರಲಿ
ನಗುತ ಸಾಗುವ ನಾವು
ಹಚ್ಚೋಣ ಲಕ್ಷ ದೀಪ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಜಕಾರಣ
Next post ಓಯಸಿಸ್ಸು

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

cheap jordans|wholesale air max|wholesale jordans|wholesale jewelry|wholesale jerseys