ಸ್ಥಿತ್ಯಂತರ

ಮೊದಮೊದಲೆಲ್ಲ ಈ ಮೋಡಗಳೊಳಗೆ
ಬರೀ ಕಾವಿಧರಿಸಿ ಕಮಂಡಲ ಹಿಡಿದು
ಋಷಿ ಮುನಿಗಳ ಸಮೂಹವೇ ಬಂದಂತಾಗಿ
ಭೂ ಲೋಕದವರಿಗೆ ನೀರು ಸಿಂಪಡಿಸಿ
ಸತ್ತವರನು ಉಳಿಸಿ ಆಶೀರ್ವದಿಸುವವರು ಕಾಣಿಸುತ್ತಿದ್ದರು-

ನಂತರ ನಂತರ ಬುದ್ಧ, ಗಾಂಧಿ, ಹೀಗೆ ಹೀಗೆ-
ತತ್ವ ಚಿಂತನೆಗಳ ಹೊತ್ತಿಗೆಗಳ ಹಿಡಿದು
ಸಮಾಜೋದ್ಧಾರ ಮಾನವೀಯತೆಯ ಬೀಜಗಳ
ಮಂತ್ರ ಉಚ್ಚರಿಸುತ, ಎಚ್ಚರಿಸುತ
ಬರುವುದಾ ನೋಡತೊಡಗಿದೆ.

ಈಗೀಗ ಈ ಮೋಡಗಳೊಳಗೆ
ಕೋಟು, ಟೈ ಧರಿಸಿದ ಜಾಗತೀಕರಣದ ಜನ
ಕೈಯಲಿ ನೊರೆ ತುಂಬಿದ ಗ್ಲಾಸು ಹಿಡಿದು
ಹೆಣ್ಣುಗಳ ಸೊಂಟ ಬಳಸಿ ಆಯುಧಗಳ ಮಾರಾಟ ಮಾಡುತ
ನಾಟಕೀಯತೆಯ ಮೋಡಿ ಬೆರೆಸಿ
ಜಗತ್ತನ್ನೇ ಕಬಳಿಸಿ ತೀರುವೆನೆನ್ನುವ
ಹುನ್ನಾರದ ಹುಡಿ ಸಿಂಪಡಿಸುವುದ ಕಾಣುತಿರುವೆ.

ಕಮಂಡಲದ ಪವಿತ್ರ ಪ್ರೋಕ್ಷಣೆಗೂ-
ನೊರೆತುಂಬಿದ ಹಳದಿ ಗ್ಲಾಸಿಗೂ-
ಚಿಂತನೆಗಳ ಹೊತ್ತಿಗೆಗೂ-
ಮೋಡಗಳು ಒಮ್ಮೊಮ್ಮೆ ಬೆದರಿ
ಮಿಂಚು, ಗುಡುಗು, ಸಿಡಿಲುಗಳಾಗಿ ಏನೇನೋ ಮಾತನಾಡುತ್ತವೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಲ
Next post ವೃಂದಗಾನ

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

cheap jordans|wholesale air max|wholesale jordans|wholesale jewelry|wholesale jerseys