ವಿಪರ್ಯಾಸ

ಮುಗ್ಧತೆಯಲ್ಲಿ ಕೆಲ ಎಚ್ಚರಿಕೆಗಳ
ಇಟ್ಟುಕೊಳ್ಳಬೇಕಾಗುತ್ತದೆ ಇಲ್ಲದಿದ್ದರೆ
ಅದು ಬೂದಿ ಮುಚ್ಚಿದ ಕೆಂಡ
ಎದೆ ಸುಡುತ್ತದೆ.

ಆತ್ಮೀಯತೆಯಲಿ ಕೆಲ ದೂರ
ಹೊಂದಬೇಕು ಇಲ್ಲದಿದ್ದರೆ ಅದು
ಅಸ್ಥಿತ್ವವನ್ನು ಮಂಜಿನಂತೆ ಕರಗಿ
ನೀರಾಗಿ ಹರಿಸುವುದು.

ಗೇಟಿನಾಚೆಯ ಗೆಳೆಯ ಕೂಡಾ
ಒಮ್ಮೊಮ್ಮೆ ಈಷ್ಯೆಯಲಿ ಕುದಿದು
ಬಿಸಿ ಎಣ್ಣೆಯ ಶಾಖ ತಗುಲಿಸಿ
ಮನೆಯ ಬಾಗಿಲ ಬೀಗ ಮುರಿಯುವುದು.

ಕೋಪದಲಿ ಅಂದ ಮಾತುಗಳು
ಲೆಕ್ಕವಿಟ್ಟವರು ಹಲವರು ಅವರು
ಬೇಟೆಯಾಡಬಹುದು ಬರುವ ದಿನ
ಎಚ್ಚರಿಕೆಯ ಗಂಟೆಯಾಗಬಲ್ಲದು.

ವ್ಯಕ್ತ ಅವ್ಯಕ್ತ ರಿಕ್ತ ಅತಿರಿಕ್ತಗಳೆಲ್ಲವೂ
ಗುಮಾನಿಗಳಾಗಿಯೇ ಇದ್ದು ಒಮ್ಮೊಮ್ಮೆ
ಪ್ರಶ್ನೆಗಳಿಗೆ ಉತ್ತರವಾಗಬಲ್ಲದು
ಸಂಶಯದಲಿ ಒಂದು ಹಾಯಿ ನಿನ್ನ ಕಾಡಬಲ್ಲದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನಸಿನ ಮೋಡಿ
Next post ಸ್ವಗತ ಗೀತ

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

cheap jordans|wholesale air max|wholesale jordans|wholesale jewelry|wholesale jerseys