ಯುದ್ಧ

ಯುದ್ಧಗಳ ಹಿಂಸೆ ಗದ್ದಲದಲಿ
ರಣರಂಗ ರಕ್ತ ಚೆಲ್ಲಿದೆ ಮತ್ತೆ
ಗಾಯಾಳುಗಳು ಚೀರುತ್ತಿದ್ದಾರೆ
ಸಾವಿನಲ್ಲಿ ನೋವು ಹರಡಿಕೊಂಡಿದೆ
ಅಲ್ಲಿ ಖಾಲಿ ಆವರಿಸಿಕೊಂಡಿದೆ.

ಘಟಿಸುವ ಘಟನೆಗಳನ್ನು
ದಾಖಲೆಗಳ ಲೆಕ್ಕಕ್ಕೆ ಇಟ್ಟವರ್‍ಯಾರು
ಇತಿಹಾಸದಲಿ ಹಸಿದ ಕರಳು
ಮರೆತವರು ಅಮಾಯಕರ
ನೋಟುಗಳು ಬರೀ ಶೂನ್ಯಗಳಾಗಿವೆ.

ಮುರಿದ ರುಂಡ ಮುಂಡಗಳ
ಚದುರಂಗದ ಆಟ ದಾಳ ಉರುಳಿಸಿ
ಅಲ್ಲಲ್ಲಿ ಬಿದ್ದ ರಕ್ತದೋಕುಳಿ
ಎಲ್ಲಾ ಸಾಮಗ್ರಿಗಳು ಸವೆದ ದಾರಿ
ವ್ಯವಸ್ಥೆ ಕೊಲ್ಲುವ ಯಂತ್ರವಾಗಿದೆ.

ಮಾರಣಾಂತಿಕ ಹಲ್ಲೆಗಳ
ಸರಮಾಲೆ ತಯಾರಾಗಿ ಕುಳಿತಿದ್ದಾನೆ
ಕೊಲೆಗಾರ ಯಾರಿಗೋ ಕಾಯುತ್ತ
ಯಾವ ತಾಯಿಯ ಮಡಿಲು ಬರಿದೋ
ಎಲ್ಲವೂ ಸುಟ್ಟ ಕರಕಾಗುವ ಆಕ್ರಮಣ.

ಎಲ್ಲಾ ಚೀತ್ಕಾರಗಳ ನಡುವೆ
ಸೂರ್ಯ ಕಿರಣಗಳ ಬಿಟ್ಟಿದ್ದಾನೆ
ಸಾಯುವ ನೋಯುವ ಕ್ಷಣಗಳ
ಕಾರ್ಯ ಕಾಯಕ ನರಮೇಧ
ಕಾರಣ ನಾನಲ್ಲ ಎಂದು ಕಂತುತ್ತಿದ್ದಾನೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೃದಯ ಒಲವಿಗೆ ಅಲ್ಲದಿನ್ನೇತಕೆ?
Next post ಎಚ್ಚರ!

ಸಣ್ಣ ಕತೆ

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

cheap jordans|wholesale air max|wholesale jordans|wholesale jewelry|wholesale jerseys