ನಿನ್ನ ಪತ್ರ

ನೀ ಮೊನ್ನೆ ಅಚಾನಕ್ಕಾಗಿ
ಪತ್ರ ಬರೆದೆ ಅದರ ತೇವ
ನನ್ನ ತೋಯಿಸಿತು ಕಣ್ಣು
ನೀರಿನ ಕೊಳವಾಯ್ತು ಮಂಕಾದೆ.

ಯಾಕೆ ಹೀಗೆ ಮೋಡದಲಿ ತೇಲಿ
ತೇಲಿ ಬಂದೆ ಬರ್‍ರನೆ ಮಳೆ ಸುರಿಸಿ
ಮನೆ ಮಠ ಮನಸ್ಸನ್ನೆಲ್ಲಾ
ರಾಡಿ ನೆನಪಿನ ಊಟೆಗಳಿದ್ದವು ನನ್ನಲಿ.

ಗಾಳಿ ಮಳೆ ಚಳಿ ಬಿಸಿಲಿಗೆ
ಮೈ ಮನ ಮರಗಟ್ಟಿ ಹೋಗಿ
ನಡೆದ ದಾರಿಯ ಮರೆತಿದ್ದೆ
ಒಣಧೂಳಿನ ಓಣಿ ದಾಟಿ ಓಲೆ ಬಂತು.

ಓಡಿ ಪಾರಾಗಲು ಸಾಧ್ಯವಾಗದೇ
ನಿನ್ನಕ್ಷರಗಳು ಸಿಲುಕಿ ಒದ್ದಾಡಿದೆ
ನೀ ನನ್ನ ಇಷ್ಟೊಂದು ಕ್ರೂರವಾಗಿ
ಶಿಕ್ಷಿಸಬಾರದಾಗಿತ್ತು ದಾರುಣವಾಗಿ
ಒಂದು ಸಣ್ಣ ಗಲಿಬಿಲಿ ಸಾಕು ಶಾಶ್ವತವಾದ
ಸೋಲು ಅನುಭವಿಸಲು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೃದಯದಲಿ ಕೂಡಿಯಾಡುವ ಹೋಳಿ
Next post ಅಕ್ಕನ ಭಾವಗೀತೆ

ಸಣ್ಣ ಕತೆ

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

cheap jordans|wholesale air max|wholesale jordans|wholesale jewelry|wholesale jerseys